ಆ್ಯಪ್ನಗರ

ಕಾರು ಡಿಕ್ಕಿ: ಬೈಕ್‌ ಸವಾರ ಸಾವು

ಬೆಳಗಾವಿ: ಮಹಾರಾಷ್ಟ್ರದ ಚಂದಗಡ ತಾಲೂಕಿನ ಗಳೆ ಕ್ರಾಸ್‌ ಹತ್ತಿರ ಭಾನುವಾರ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೆಳಗಾವಿಯ ಓರ್ವ ಯುವಕ ...

Vijaya Karnataka 23 Jul 2018, 5:00 am
ಬೆಳಗಾವಿ: ಮಹಾರಾಷ್ಟ್ರದ ಚಂದಗಡ ತಾಲೂಕಿನ ಗಳೆ ಕ್ರಾಸ್‌ ಹತ್ತಿರ ಭಾನುವಾರ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೆಳಗಾವಿಯ ಓರ್ವ ಯುವಕ ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.
Vijaya Karnataka Web BEL-22 LBS 8


ಬೆಳಗಾವಿಯ ಅನಗೋಳದ ಭರತ ಹಂಜಿ (26) ಮೃತ ಯುವಕ. ಬಸಲಿಂಗ ಗಣಾಚಾರಿ (28) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ರಜಾ ದಿನವಾದ್ದರಿಂದ ಗೆಳೆಯರಿಬ್ಬರು ಜತೆಗೂಡಿ ಅಂಬೋಲಿ ಜಲಪಾತ ವೀಕ್ಷಿಸಲು ಬೆಳಗಾವಿಯಿಂದ ಅಂಬೋಲಿ ಕಡೆಗೆ ಬೈಕ್‌ ಮೇಲೆ ಹೊರಟಿದ್ದಾಗ ಎದುರಿಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿಯೇ ಭರತ ಹಂಜಿ ಮೃತಪಟ್ಟಿದ್ದಾರೆ. ಗಾಯಗೊಂಡ ಬಸಲಿಂಗ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಂಬೋಲಿ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ