ಆ್ಯಪ್ನಗರ

ರೈತರು-ಪೊಲೀಸರ ನಡುವೆ ಸಂಧಾನ ಯಶಸ್ವಿ: ಅನ್ನದಾತರ ಮೇಲಿನ ಕೇಸ್‌ ವಾಪಸ್

ಹಲವು ರೈತರನ್ನು ವಶಕ್ಕೆ ಪಡೆದಿದ್ದ ಹಿರೇಬಾಗೇವಾಡಿ ಪೊಲೀಸರು ಅವರ ವಿರುದ್ಧ ಕೇಸ್ ದಾಖಲಿಸಲು ಕೂಡ ಎಲ್ಲಾ ಸಿದ್ದತೆ ಮಾಡಿಕೊಂಡು ಸೆಕ್ಷನ್ ಕೂಡ ಹಾಕಿದ್ದ‌ರು. ನಂತರ ಡಿಸಿಪಿ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದ್ದು, ಸಭೆ ಯಶಸ್ವಿಯಾಗಿದೆ.

Vijaya Karnataka Web 18 Nov 2018, 8:36 pm
ಬೆಳಗಾವಿ: ಜಿಲ್ಲೆಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯವಾಗಿದ್ದು, ರೈತರು ಪೊಲೀಸರ ನಡುವೆ ಸಂಧಾನ ಯಶಸ್ವಿಯಾಗಿದೆ. ಅಲ್ಲದೆ, ರೈತರ ಮೇಲಿನ ಕೇಸ್‌ ವಾಪಸ್ ಪಡೆಯುತ್ತಿದ್ದಂತೆ ಬೆಂಗಳೂರಿನಲ್ಲಿ ನಡೆಯಲಿರುವ ಸಿಎಂ ಸಭೆಗೆ ಹೋಗಲು ರೈತರು ನಿರ್ಧಾರ ಮಾಡಿದ್ದಾರೆ.
Vijaya Karnataka Web sugarcane farmers


ರೈತರು ಪೊಲೀಸರ ನಡುವೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಂಧಾನ ನಡೆದಿದ್ದು, ಈ ಸಭೆಯಲ್ಲಿ ಬೆಳಗಾವಿ ಮತ್ತು ಬಾಗಲಕೋಟ ಜಿಲ್ಲೆಯ ರೈತರು ಪಾಲ್ಗೊಂಡಿದ್ದರು. ಡಿಸಿಪಿ‌ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಭೆ ನಡೆದಿದೆ.

ಇನ್ನು, ಹಲವು ರೈತರನ್ನು ವಶಕ್ಕೆ ಪಡೆದಿದ್ದ ಹಿರೇಬಾಗೇವಾಡಿ ಪೊಲೀಸರು ಅವರ ವಿರುದ್ಧ ಕೇಸ್ ದಾಖಲಿಸಲು ಕೂಡ ಎಲ್ಲಾ ಸಿದ್ದತೆ ಮಾಡಿಕೊಂಡು ಸೆಕ್ಷನ್ ಕೂಡ ಹಾಕಿದ್ದ‌ರು. ನಂತರ, ಬೆಳಗಾವಿ ಮತ್ತು ಬಾಗಲಕೋಟ ಜಿಲ್ಲೆಯ ರೈತರು ಹಾಗೂ ಡಿಸಿಪಿ‌ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ. ಸಂಧಾನ ಯಶಸ್ವಿಯಾಗುತ್ತಿದ್ದಂತೆ ನವೆಂಬರ್ 20ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಗೆ ರೈತರು ಹೋಗಲು ನಿರ್ಧಾರ ಮಾಡಿದ್ದಾರೆ. ಬಳಿಕ ಹಿರೇಬಾಗೇವಾಡಿ ಪೊಲೀಸರ ವಶದಲ್ಲಿದ್ದ ಹತ್ತು‌ ಜನ ರೈತರನ್ನು ಬಿಡುಗಡೆ ಮಾಡಲಾಗಿದೆ.

ಕಬ್ಬು ಬೆಳೆಗಾರರ ಸಮಸ್ಯೆ ಚರ್ಚಿಸಲು ನವೆಂಬರ್‌ 20 ರಂದು ಸಭೆ
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ನವೆಂಬರ್ 20 ರಂದು ಮಧ್ಯಾಹ್ನ 3.00 ಗಂಟೆಗೆ ರೈತ ಮುಖಂಡರು, ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಬೆಳಗಾವಿ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಈ ಸಭೆ ಏರ್ಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರ ಉಪಸ್ಥಿತಿಯ ಅಗತ್ಯವಿರುವ ಹಿನ್ನೆಲೆಯಲ್ಲಿ ಸಭೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಸಭೆಯ ಕುರಿತು ರೈತ ಮುಖಂಡರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ