ಆ್ಯಪ್ನಗರ

ಬೆಳಗಾವಿ, ಚಿಕ್ಕೋಡಿಯಲ್ಲಿ ಶಿಕ್ಷಕರಿಂದ ತರಗತಿ ಬಹಿಷ್ಕಾರ, ಪ್ರತಿಭಟನೆ ಇಂದು

ಬೆಳಗಾವಿ/ಚಿಕ್ಕೋಡಿ : ಪ್ರಾಥಮಿಕ ಶಾಲಾ ಶಿಕ್ಷ ಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರಕಾರಿ ಶಾಲಾ ಶಿಕ್ಷಕರು ...

Vijaya Karnataka 9 Jul 2019, 5:00 am
ಬೆಳಗಾವಿ/ಚಿಕ್ಕೋಡಿ : ಪ್ರಾಥಮಿಕ ಶಾಲಾ ಶಿಕ್ಷ ಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರಕಾರಿ ಶಾಲಾ ಶಿಕ್ಷಕರು ಮಂಗಳವಾರ ಸೇವೆ ಬಹಿಷ್ಕರಿಸಿ ಧರಣಿ ನಡೆಸಲು ಮುಂದಾಗಿದ್ದಾರೆ. ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಯಲಿದೆ.
Vijaya Karnataka Web classroom boycott and protest by teachers in belagavi
ಬೆಳಗಾವಿ, ಚಿಕ್ಕೋಡಿಯಲ್ಲಿ ಶಿಕ್ಷಕರಿಂದ ತರಗತಿ ಬಹಿಷ್ಕಾರ, ಪ್ರತಿಭಟನೆ ಇಂದು


ಮಂಗಳವಾರ ಬೆಳಗ್ಗೆ 10 ಗಂಟೆಗೆ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಸಮಾವೇಶ ನಡೆಸಲಿದ್ದಾರೆ. ಜಿಲ್ಲೆಯ ಎಲ್ಲ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಶಾಲಾ ಚಟುವಟಿಕೆ ಬಹಿಷ್ಕರಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾ ಮಟ್ಟದಿಂದ ಪ್ರಾಥಮಿಕ ಶಾಲಾ ಶಿಕ್ಷ ಕರಿಗೆ ಬಡ್ತಿ ನೀಡುವುದು, ಪ್ರಾಥಮಿಕ ಶಾಲೆಯಲ್ಲಿರುವ ಪದವೀಧರ ಶಿಕ್ಷ ಕರಿಗೆ 6 ರಿಂದ 8ನೇ ತರಗತಿಗೆ ನಿಯುಕ್ತಿಗೊಳಿಸುವುದು ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷ ಕರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಸಮಾವೇಶ ಮೂಲಕ ಸರಕಾರವನ್ನು ಒತ್ತಾಯಿಸಲಾಗುವುದು. ನಂತರ ಗಾಂಧಿ ಭವನದಿಂದ ಚನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಳಗಾವಿ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ ಹೆಬಳಿ ತಿಳಿಸಿದ್ದಾರೆ.

ಅದೇ ರೀತಿ ಚಿಕ್ಕೋಡಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಿಕ್ಕೋಡಿ ಪಟ್ಟಣದಲ್ಲಿನ ಡಯಟ್‌ ಆವರಣದಲ್ಲಿ ಧರಣಿ ನಡೆಸಲಾಗುವುದು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲ ಎಂಟು ವಲಯಗಳ ಪ್ರಾಥಮಿಕ ಶಾಲಾ ಶಿಕ್ಷಕರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು ಜಿಲ್ಲಾ ಅಧ್ಯಕ್ಷ ಜಿ.ಎಂ.ಹಿರೇಮಠ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ