ಆ್ಯಪ್ನಗರ

ಫೆ.18ರಿಂದ ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟಿಂಗ್‌ ಗ್ರಾಪಂ ನೌಕರರ ಪ್ರತಿಭಟನೆ

ತೆಲಸಂಗ: ಕರ್ನಾಟಕ ಗ್ರಾಮ ಪಂಚಾಯಿತಿ ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು ಇಲಾಖೆಯ ಮಲತಾಯಿ ಧೋರಣೆ ಖಂಡಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಫೆ...

Vijaya Karnataka 15 Feb 2019, 5:00 am
ತೆಲಸಂಗ : ಕರ್ನಾಟಕ ಗ್ರಾಮ ಪಂಚಾಯಿತಿ ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು ಇಲಾಖೆಯ ಮಲತಾಯಿ ಧೋರಣೆ ಖಂಡಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಫೆ. 18 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ ಎಂದು ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟಿಂಗ್‌ ಗ್ರಾಪಂ ನೌಕರರ ಸಂಘದ ಸದಸ್ಯ ಸಂಗಮೇಶ ಕುಮಠಳ್ಳಿ ಹೇಳಿದರು.
Vijaya Karnataka Web BEL-14TELSANG2


ಗ್ರಾಮದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಪಂಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಹಲವಾರು ಯೋಜನೆಗಳ ಅನುಷ್ಠಾನಕ್ಕಾಗಿ ಹಗಲಿರಳು ದುಡಿದಿದ್ದು ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ನಮ್ಮ ಬೆವರಿನ ಶ್ರಮದಿಂದ ಹಲವಾರು ಪ್ರಶಸ್ತಿಗಳು ಬಂದಿವೆ. ಆದರೂ ಇಲಾಖೆಯಲ್ಲಿ ನಮ್ಮ ಯಾವುದೇ ಬೇಡಿಕೆಗಳನ್ನು ಮನ್ನಿಸದೆ ಮಲತಾಯಿ ಧೋರಣೆ ಮತ್ತು ನಿರಂತರ ಶೋಷಣೆ ನಡೆಯುತ್ತಿದೆ. ಹೀಗಾಗಿ ರಾಜ್ಯಾದ್ಯಂತ 5629 ಗ್ರಾಪಂನವರು ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಫೆ.18ರಂದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾಗಿ ತಿಳಿಸಿದರು.

ಆರ್ಥಿಕ ಇಲಾಖೆಯಿಂದ ಅನುಮೋದನೆಗೊಂಡ ಕಡತಕ್ಕೆ ಸರಕಾರಿ ಆದೇಶ ಹೊರಡಿಸಬೇಕು. ನಾವು ಈ ಹಿಂದೆ ಗ್ರಾಮ ಪಂಚಾಯತಿಯಲ್ಲಿ ಸೇವೆಗೆ ಸೇರಿದ ದಿನಾಂಕ. ಸೇವೆಯನ್ನು ಪರಿಗಣನೆ ಮಾಡಬೇಕು. ಈ ವಿಷಯ ಕುರಿತು ನೀಡಿದ ಮನವಿ ಇಲಾಖೆಯಲ್ಲಿ ಕಾಣೆಯಾಗಿದ್ದು ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಈ ಹಿಂದೆ ಗ್ರಾಪಂನಲ್ಲಿ ಕ್ಲರ್ಕ್‌ ಎಂದು ಹುದ್ದೆ ಇರುವುದರಿಂದ ಸದರಿ ಗ್ರಾಪಂ ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಹೆಚ್ಚುವರಿಯಾಗಿ ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ ಎಂದು ಅನುಮೋದನೆ ನೀಡಬೇಕು. ರಾಜ್ಯದಲ್ಲಿ ಶೇ.38ರಷ್ಟು ಮಹಿಳಾ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದು ಅವರಿಗೆ ಈವರೆಗೆ ಮಹಿಳೆಯರಿಗೆ ಸಿಗುವ ಸರಕಾರದ ಸೌಲಭ್ಯಗಳು ಸಿಗುತ್ತಿಲ್ಲ ಇವೆಲ್ಲ ಬೇಡಿಕೆಗಳ ಬಗ್ಗೆ ಮತ್ತೆ ಸರಕಾರದ ಗಮನ ಸೆಳೆಯಲಾಗುವುದು ಎಂದು ಅವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ