ಆ್ಯಪ್ನಗರ

ಸೈನಿಕರಿಗೆ ಸಿಎಂ ಅವಹೇಳನ: ಪ್ರತಿಕೃತಿ ದಹಿಸಿ ಪ್ರತಿಭಟನೆ

ಅಥಣಿ : ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಸೈನಿಕರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ...

Vijaya Karnataka 17 Apr 2019, 5:00 am
ಅಥಣಿ : ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಸೈನಿಕರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಅಥಣಿ ತಾಲೂಕು ಮಾಜಿ ಸೈನಿಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಸಿಎಂ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web BEL-16 ATHANI-01


ಈ ವೇಳೆ ತಾಲೂಕು ಮಾಜಿ ಸೈನಿಕ ಸಂಘದ ಅಧ್ಯಕ್ಷ ಗುರಪ್ಪ ಮಗದುಮ್ಮ ಮಾತನಾಡಿ, 'ರಾಜ್ಯದ ಅತ್ಯುನ್ನತ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು ಸೈನಿಕರ ಬಗ್ಗೆ ತುಚ್ಛ ಮಾತುಗಳನ್ನಾಡಿ ಸೈನಿಕರ ಮತ್ತು ಅವರ ಕುಂಟುಂಬದವರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಇದು ಅವರ ಸ್ಥಾನಕ್ಕೆ ಶೋಭೆಯಲ್ಲ. ಸೈನಿಕರ ಮನೋಬಲ ಕುಗ್ಗಿಸುವ ಇಂಥ ಮಾತುಗಳು ಮರುಕಳಿಸದಂತೆ ನೋಡಿಕೊಳ್ಳುವ ಜತೆಗೆ ಸಿಎಂ ದೇಶದ ಸೈನಿಕರಲ್ಲಿ ಕ್ಷಮೆಯಾಚಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಪಟ್ಟಣದ ಸೈನಿಕರ ಸಂಘದ ಕಚೇರಿಯಿಂದ ಆರಂಭವಾದ ಪ್ರತಿಭಟನಾ ರಾರ‍ಯಲಿ ಬಸವೇಶ್ವರ ವೃತ್ತ, ಶಿವಯೋಗಿ ವೃತ್ತದ ಮೂಲಕ ಹಾಯ್ದು ಡಾ. ಬಿ.ಆರ್‌. ಅಂಬೇಡ್ಕರ ವೃತ್ತದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಲಾಯಿತು. ನಂತರ ಮಾಜಿ ಸೈನಿಕರು ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಚಿಕ್ಕೊಡಿ ಮಾಜಿ ಸೈನಿಕ ಸಂಘದ ಅಧ್ಯಕ್ಷ ಕರ್ನಲ್‌ ಸಂಗ್ರೋಳ್ಳಿ, ಜಮಖಂಡಿಯ ಮಾಜಿ ಸೈನಿಕ ಸಂಘದ ಅಧ್ಯಕ್ಷ ಸುರೇಶ ತಳವಾರ ಸೇರಿದಂತೆ ಮಾಜಿ ಸೈನಿಕರಾದ ನಿಂಗಪ್ಪ ದೊಡ್ಡಣ್ಣವರ, ಅಶೋಕ ಬೆಟಗೇರಿ, ಎಸ್‌.ಎಸ್‌. ಸೊಂದಕರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ