ಆ್ಯಪ್ನಗರ

ಬೆಳಗಾವಿ ಕಾಳಜಿ ಕೇಂದ್ರದಲ್ಲಿ ಮಗು ಸಾವು: ಐದು ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಬೆಳಗಾವಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯಲ್ಲಿ ಸಾವಿರಾರು ಮಂದಿ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಅನಾರೋಗ್ಯದಿಂದ ಪುಟ್ಟ ಮಗುವೊಂದು ಕೊನೆಯುರೆಳೆದಿದೆ.

Vijaya Karnataka Web 10 Sep 2019, 5:12 pm
ಬೆಳಗಾವಿ: ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ದೊಡ್ಡ ಹಂಪಿಹೊಳಿ ಗ್ರಾಮದ ನಾಲ್ಕು ವರ್ಷದ ಬಾಲಕ ಅಬ್ದುಲ್‌ಸಾಬ್ ಮುಲ್ಲಾನವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಪ್ರವಾಹ ಸಂದರ್ಭದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯೊಬ್ಬರು ಇದುವರೆಗೆ ಪತ್ತೆಯಾಗದಿರುವುದರಿಂದ ಅವರ ಕುಟುಂಬಕ್ಕೂ ಐದು ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕಳೆದ ಕೆಲವು ದಿನಗಳಿಂದ ಇಲ್ಲಿನ ಕಾಳಜಿ ಕೇಂದ್ರದಲ್ಲಿದ್ದ ಮಗುವೊಂದು ತೀವ್ರ ಅಸ್ವಸ್ಥಗೊಂಡಿತ್ತು. ಕೆಲವು ದಿನಗಳ ಹಿಂದೆ ಮಗು ಕೊನೆಯುಸಿರೆಳೆದಿತ್ತು. ಇದು ಕಾಳಜಿ ಕೇಂದ್ರದಲ್ಲಿದ್ದವರಿಗೆ ತೀವ್ರ ಬೇಸರ ತರಿಸಿತ್ತು. ಜತೆಗೆ ಆತಂಕ ಕೂಡ ಉಂಟು ಮಾಡಿತ್ತು.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಎಲ್ಲ ಸಂತ್ರಸ್ತರಿಗೆ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ