ಬೆಳಗಾವಿ: ಇಲ್ಲಿನ ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಸದ್ಯ ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಇಬ್ರಾಹೀಮ್ ಮೈಗೂರ ಆಗಮಿಸಲಿದ್ದಾರೆ. ಈ ಹಿಂದೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಶಶಿಧರ ಕುರೇರ ವರ್ಗಾವಣೆಗೊಂಡು ಬಾಗಲಕೋಟ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದರು. ಚುನಾವಣೆ ನಂತರ ಪುನಃ ಪಾಲಿಕೆ ಆಯುಕ್ತ ಸ್ಥಾನಕ್ಕೆ ಮರಳಿದ್ದರು. ಈ ಬಾರಿಯೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರನ್ನು ವರ್ಗಾಣೆ ಮಾಡಲಾಗಿದೆ ಎನ್ನಲಾಗುತ್ತಿದ್ದರೂ, ಮುಂದಿನ ಕಾರ್ಯಸ್ಥಾನವನ್ನು ತೋರಿಸಿಲ್ಲ.
ಪಾಲಿಕೆ ಆಯುಕ್ತ ಶಶಿಧರ ಕುರೇರ್ ವರ್ಗಾವಣೆ
ಇಲ್ಲಿನ ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಸದ್ಯ ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಇಬ್ರಾಹೀಮ್ ಮೈಗೂರ ಆಗಮಿಸಲಿದ್ದಾರೆ...
Vijaya Karnataka 18 Feb 2019, 5:00 am