ಚಿಕ್ಕೋಡಿ : ಇಲ್ಲಿನ ಸಿಟಿಇ ಶಿಕ್ಷ ಣ ಸಂಸ್ಥೆಯ ಆರ್.ಡಿ.ಕಾಲೇಜಿನಲ್ಲಿ ಮೇ 23ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆ ಪ್ರಕ್ರಿಯೆಗೆ ಅಗತ್ಯದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ಇಲ್ಲಿನ ಮಿನಿವಿಧಾನ ಸೌಧದ ಸಭಾಭವನದಲ್ಲಿ ಮಂಗಳವಾರ ನಡೆದ ಮತ ಎಣಿಕೆ ತಯಾರಿ ಕುರಿತು ಅಭ್ಯರ್ಥಿಗಳು ಹಾಗೂ ಏಜೆಂಟರ ಸಭೆಯಲ್ಲಿ ಅವರು ಮಾತನಾಡಿದರು.
''ಮತ ಎಣಿಕೆಗೆ ಬರುವ ಏಜೆಂಟರು ಹಾಗೂ ಅಭ್ಯರ್ಥಿಗಳು ತಮಗೆ ನೀಡಿರುವ ಗುರುತಿನ ಪತ್ರವನ್ನು ಕಡ್ಡಾಯವಾಗಿ ತರಬೇಕು. ಇಲ್ಲವಾದಲ್ಲಿ ಎಣಿಕೆ ಕೇಂದ್ರಕ್ಕೆ ಪ್ರವೇಶವಿಲ್ಲ. ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್, ಗುಟಕಾ, ಸಿಗರೇಟ್, ಬೀಡಿ, ತಂಬಾಕು ವಸ್ತುಗಳನ್ನು ತರಬಾರದು'', ಎಂದು ತಿಳಿಸಿದರು.
ಮತ ಎಣಿಕೆಗೆ 9 ಕೊಠಡಿಗಳನ್ನು ನಿಗದಿಪಡಿಸಲಾಗಿದೆ. ಅಂಚೆ ಮತ ಎಣಿಕೆ ಹಾಗೂ ಇಟಿಪಿಬಿಎಸ್ ಮತಗಳ ಎಣಿಕೆಗಳನ್ನು ಆರ್ಒ ಕೊಠಡಿಯಲ್ಲಿ ಮಾಡಲಾಗುತ್ತಿದೆ. ಪ್ರತಿ ಮತ ಎಣಿಕೆ ಕೊಠಡಿಗಳಲ್ಲಿ 14 ಟೇಬಲ್ಗಳಲ್ಲಿ ಸುಮಾರು 450ಕ್ಕೂ ಹೆಚ್ಚಿನ ಸಿಬ್ಬಂದಿ ಮತ ಎಣಿಕೆ ಮಾಡುತ್ತಾರೆ. ಪ್ರತಿ ವಿಧಾನಸಭೆ ಮಜರೆವಾರು ಎಲ್ಲ ಮತ ಎಣಿಕೆ ಕಾರ್ಯದ ನಂತರ ಡ್ರಾ ಮೂಲಕ 5 ಮತಗಟ್ಟೆಗಳ ವಿವಿ ಪ್ಯಾಟ್ಗಳ ಪೇಪರ್ ಸ್ಲಿಪ್ಗಳನ್ನು ಎಣಿಕೆ ಮಾಡಲಾಗುವುದು'', ಎಂದರು.
ಮತ ಎಣಿಕೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಅಹಿತಕರ ಘಟನೆಗೆ ಎಡೆಮಾಡಿಕೊಡದೆ ಸಹಕರಿಸಬೇಕು.
- ಸುಧೀರಕುಮಾರ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠ
ಇಲ್ಲಿನ ಮಿನಿವಿಧಾನ ಸೌಧದ ಸಭಾಭವನದಲ್ಲಿ ಮಂಗಳವಾರ ನಡೆದ ಮತ ಎಣಿಕೆ ತಯಾರಿ ಕುರಿತು ಅಭ್ಯರ್ಥಿಗಳು ಹಾಗೂ ಏಜೆಂಟರ ಸಭೆಯಲ್ಲಿ ಅವರು ಮಾತನಾಡಿದರು.
''ಮತ ಎಣಿಕೆಗೆ ಬರುವ ಏಜೆಂಟರು ಹಾಗೂ ಅಭ್ಯರ್ಥಿಗಳು ತಮಗೆ ನೀಡಿರುವ ಗುರುತಿನ ಪತ್ರವನ್ನು ಕಡ್ಡಾಯವಾಗಿ ತರಬೇಕು. ಇಲ್ಲವಾದಲ್ಲಿ ಎಣಿಕೆ ಕೇಂದ್ರಕ್ಕೆ ಪ್ರವೇಶವಿಲ್ಲ. ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್, ಗುಟಕಾ, ಸಿಗರೇಟ್, ಬೀಡಿ, ತಂಬಾಕು ವಸ್ತುಗಳನ್ನು ತರಬಾರದು'', ಎಂದು ತಿಳಿಸಿದರು.
ಮತ ಎಣಿಕೆಗೆ 9 ಕೊಠಡಿಗಳನ್ನು ನಿಗದಿಪಡಿಸಲಾಗಿದೆ. ಅಂಚೆ ಮತ ಎಣಿಕೆ ಹಾಗೂ ಇಟಿಪಿಬಿಎಸ್ ಮತಗಳ ಎಣಿಕೆಗಳನ್ನು ಆರ್ಒ ಕೊಠಡಿಯಲ್ಲಿ ಮಾಡಲಾಗುತ್ತಿದೆ. ಪ್ರತಿ ಮತ ಎಣಿಕೆ ಕೊಠಡಿಗಳಲ್ಲಿ 14 ಟೇಬಲ್ಗಳಲ್ಲಿ ಸುಮಾರು 450ಕ್ಕೂ ಹೆಚ್ಚಿನ ಸಿಬ್ಬಂದಿ ಮತ ಎಣಿಕೆ ಮಾಡುತ್ತಾರೆ. ಪ್ರತಿ ವಿಧಾನಸಭೆ ಮಜರೆವಾರು ಎಲ್ಲ ಮತ ಎಣಿಕೆ ಕಾರ್ಯದ ನಂತರ ಡ್ರಾ ಮೂಲಕ 5 ಮತಗಟ್ಟೆಗಳ ವಿವಿ ಪ್ಯಾಟ್ಗಳ ಪೇಪರ್ ಸ್ಲಿಪ್ಗಳನ್ನು ಎಣಿಕೆ ಮಾಡಲಾಗುವುದು'', ಎಂದರು.
ಮತ ಎಣಿಕೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಅಹಿತಕರ ಘಟನೆಗೆ ಎಡೆಮಾಡಿಕೊಡದೆ ಸಹಕರಿಸಬೇಕು.
- ಸುಧೀರಕುಮಾರ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠ