ಆ್ಯಪ್ನಗರ

ಬೆಳಗಾವಿ ನಗರ ಸಮಗ್ರ ಅಭಿವೃದ್ಧಿಗೆ ಯೋಜನೆ; ಸಭೆಯಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಹೇಳಿಕೆ

ಬೆಳಗಾವಿ: ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ) ವ್ಯಾಪ್ತಿಯ ವಿಧಾನಸಭಾ ...

Vijaya Karnataka 6 Jul 2020, 5:00 am
ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ) ವ್ಯಾಪ್ತಿಯ ವಿಧಾನಸಭಾ ಮತಕ್ಷೇತ್ರಗಳಲ್ಲಿಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಳ ವಿಷಯವಾಗಿ ಶನಿವಾರ ಬುಡಾ ಕಚೇರಿಯಲ್ಲಿಸಭೆ ನಡೆಯಿತು.
Vijaya Karnataka Web 51254BGM1082713
ಬುಡಾದಲ್ಲಿ ನಡೆದ ಮಾಸಿಕ ಸಭೆಯಲ್ಲಿಅಭಿವೃದ್ಧಿ ಯೋಜನೆಗಳ ಕುರಿತು ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಶಾಸಕರೊಂದಿಗೆ ಸಭೆ ನಡೆಸಿದರು.


ವಿಧಾನಸಭಾ ವ್ಯಾಪ್ತಿಯಲ್ಲಿಹೊಸ ಬಡಾವಣೆ ನಿರ್ಮಿಸಲು ಸ್ಥಳಾವಕಾಶ, ಗಟಾರು, ರಸ್ತೆ ನಿರ್ಮಾಣ ವಿಷಯಗಳ ಕುರಿತು ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಸಂಬಂಧಿಸಿದ ಶಾಸಕರ ಜತೆಗೆ ಚರ್ಚಿಸಿದರು. ಅಲ್ಲದೆ, ಈಗಾಗಲೆ ದಾಖಲಿರುವ ಭೂಸ್ವಾಧೀನ ಪ್ರಕರಣಗಳ ಇತ್ಯರ್ಥ ಕುರಿತು ಸಭೆಯಲ್ಲಿಚರ್ಚಿಸಲಾಗಿದೆ. ಶಾಸಕರು ಮತ್ತು ಅಧಿಕಾರಿಗಳ ಸಲಹೆಗಳ ಆಧಾರದ ಮೇಲೆ ಬರುವ ದಿನಗಳಲ್ಲಿಬುಡಾದಿಂದ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗುವುದು ಎಂದು ಘೂಳಪ್ಪ ಹೊಸಮನಿ ತಿಳಿಸಿದ್ದಾರೆ.

ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್‌, ಅನಿಲ ಬೆನಕೆ, ಅಭಯ ಪಾಟೀಲ ಮತ್ತು ಅಧಿಕಾರಿಗಳು ಸಭೆಯಲ್ಲಿಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ