ಬೆಳಗಾವಿ : ನಗರದ ರೈಲ್ವೆ ಸಮುದಾಯ ಭವನದಲ್ಲಿ ಮೇ 4 ಮತ್ತು 5 ರಂದು ಕರ್ನಾಟಕ ರಾಜ್ಯ ಔಷಧ ಮಾರಾಟ ಪ್ರತಿನಿಧಿಗಳ ಸಂಘದ ವತಿಯಿಂದ 25ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಚಂದ್ರಕುಮಾರ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 4 ರಂದು ಬೆಳಗ್ಗೆ 10.30 ಗಂಟೆಗೆ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಎನ್.ಡಿ.ಜೆಂಗಾಡೆ, ಡಾ. ರವಿ ಪಾಟೀಲ, ಸಮಿತಿ ಅಧ್ಯಕ್ಷ ಡಾ. ರಮೇಶ ದೊಡ್ಡನವರ, ಪ್ರಧಾನ ಕಾರ್ಯದರ್ಶಿ ಸಂತನು ಚಟರ್ಜಿ, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 400 ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಬಹುರಾಷ್ಟ್ರೀಯ ಕಂಪನಿಗಳು ದೇಶದ ಔಷಧ ಕಂಪನಿಗಳ ಖರೀದಿ ಮಾಡುವುದನ್ನು ತಡೆಯುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಈಡೇರಿಸಬೇಕು. ಬೇಡಿಕೆ ಈಡೇರಿಸುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರಕಾರಗಳು ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿ ಮುಖಂಡ ಎಚ್.ಜಿ. ಸುರೇಶ, ಆನಂದ ರಾಜು, ಪ್ರಸಾದ್ ದೇಸಾಯಿ ಇತರರು ಉಪಸ್ಥಿತರಿದ್ದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 4 ರಂದು ಬೆಳಗ್ಗೆ 10.30 ಗಂಟೆಗೆ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಎನ್.ಡಿ.ಜೆಂಗಾಡೆ, ಡಾ. ರವಿ ಪಾಟೀಲ, ಸಮಿತಿ ಅಧ್ಯಕ್ಷ ಡಾ. ರಮೇಶ ದೊಡ್ಡನವರ, ಪ್ರಧಾನ ಕಾರ್ಯದರ್ಶಿ ಸಂತನು ಚಟರ್ಜಿ, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 400 ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಬಹುರಾಷ್ಟ್ರೀಯ ಕಂಪನಿಗಳು ದೇಶದ ಔಷಧ ಕಂಪನಿಗಳ ಖರೀದಿ ಮಾಡುವುದನ್ನು ತಡೆಯುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಈಡೇರಿಸಬೇಕು. ಬೇಡಿಕೆ ಈಡೇರಿಸುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರಕಾರಗಳು ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿ ಮುಖಂಡ ಎಚ್.ಜಿ. ಸುರೇಶ, ಆನಂದ ರಾಜು, ಪ್ರಸಾದ್ ದೇಸಾಯಿ ಇತರರು ಉಪಸ್ಥಿತರಿದ್ದರು.