ಆ್ಯಪ್ನಗರ

ಕಾಂಗ್ರೆಸ್-ಜೆಡಿಎಸ್‌ಗೆ ತಲಾ ಎರಡು ಸಚಿವ ಸ್ಥಾನ: ವೀರಣ್ಣ ಮತ್ತಿಕಟ್ಟಿ

ಸಿದ್ದರಾಮಯ್ಯ ನೇತೃತ್ವದ ಸರಕಾರ ಮಾಡಿದ ಅಭಿವೃದ್ಧಿಯ ಕೆಲಸ ನಮಗೆ ಕೈ ಹಿಡಿಯಲಿಲ್ಲ. ಬಿಜೆಪಿಯವರು ಮಾಡಿರುವ ಅಪಪ್ರಚಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪಲ್ಪ ಹಿನ್ನಡೆ.

Vijaya Karnataka Web 29 Nov 2018, 3:25 pm
ಬೆಳಗಾವಿ: ಸಮ್ಮಿಶ್ರ ಸರಕಾರದ‌ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್‌ಗೆ ಎರಡು ಹಾಗೂ ಜೆಡಿಎಸ್‌ಗೆ ಎರಡು ಸಚಿವ ಸ್ಥಾನ ಖಾಲಿ ಇವೆ. ಶೀಘ್ರದಲ್ಲಿಯೇ ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಹೇಳಿದರು.
Vijaya Karnataka Web vidhan soudha


ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಾಡಿದ ಅಭಿವೃದ್ಧಿಯ ಕೆಲಸ ನಮಗೆ ಕೈ ಹಿಡಿಯಲಿಲ್ಲ. ಬಿಜೆಪಿಯವರು ಮಾಡಿರುವ ಅಪಪ್ರಚಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪಲ್ಪ ಹಿನ್ನಡೆಯಾಯಿತು ಎಂದರು.

ಸುಳ್ಳು ಪ್ರಚಾರದಿಂದ ಜನರನ್ನು ಮರಳು ಮಾಡಿ ಅಧಿಕಾರಕ್ಕೆ‌ ಬಂದ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಲು ಹೆಣಗಾಡುತ್ತಿದ್ದಾರೆ ಎಂದರು.

ಬಿಜೆಪಿಗರು ಪ್ರತಿ ಚುನಾವಣೆಗೆ ಒಂದೊಂದು ವಾಗ್ದಾನ ಮಾಡಿತ್ತಾರೆ. ಅಧಿಕಾರಕ್ಕೆ‌ ಬಂದು ಹದಿನೈದು ‌ದಿನದಲ್ಲಿ ಸಾಮಾನ್ಯ ಜನರಿಗೆ ಹದಿನೈದು ಲಕ್ಷ ರೂ. ಹಣ ಎಲ್ಲರ ಖಾತೆಗೆ ಹಾಕುತ್ತೇವೆ ಎಂದು ಹೇಳಿದ್ದರು. ಪ್ರತಿ ವರ್ಷ ನಿರುದ್ಯೋಗಿಗಳಿಗೆ ಎರಡು ಕೋಟಿ‌ ಉದ್ಯೋಗ ಕೊಡಿಸುತ್ತೇನೆ ಎಂದು ಹೇಳಿ ದೇಶದ ಜನರಿಗೆ ಮೋಸ‌ ಮಾಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಹತ್ತು ಲಕ್ಷ‌ ಶಕ್ತಿ‌ ನೋಂದಣಿ ಗುರಿ ಇಟ್ಟುಕೊಂಡಿದ್ದೇವೆ. ಈಗಾಗಲೇ ಏಳು ಲಕ್ಷ ನೋಂದಣಿ ಮಾಡಲಾಗಿದೆ. ಬೆಳಗಾವಿಯಲ್ಲಿ ಸ್ವಲ್ಪ ಕಡಿಮೆಯಾಗಿದೆ. ಆದ್ದರಿಂದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಸಾವಿರ ನೋಂದಣಿ‌ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ