ಆ್ಯಪ್ನಗರ

ಬೆಳಗಾವಿಯಲ್ಲಿ ಸಹೋದರರ ಸಮರ: ರಮೇಶ್ ವಿರುದ್ಧ ಮತ್ತೆ ಹರಿಹಾಯ್ದ ಸತೀಶ್

ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಮತ್ತೆ ಅನರ್ಹ ಶಾಸಕರ ರಮೇಶ್ ಜಾರಕಿಹೊಳಿ ವಿರುದ್ಧ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಗೋಕಾಕ್ ಕ್ಷೇತ್ರಕ್ಕೆ ದುರ್ಬಲ ಅಭ್ಯರ್ಥಿಯನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸುವ ಪ್ರಯತ್ನವನ್ನು ರಮೇಶ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Vijaya Karnataka Web 10 Nov 2019, 4:05 pm
ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಹಾಗೂ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಡುವೆ ತಿಕ್ಕಾಟ ತೀವ್ರಸ್ವರೂಪ ಪಡೆದುಕೊಂಡಿದ್ದು ಸಹೋದರನ ವಿರುದ್ಧ ಮತ್ತೆ ಸತೀಶ್ ವಾಗ್ದಾಳಿ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ದೆಹಲಿಯ ಕೆಲವು ಕಾಂಗ್ರೆಸ್ ಮುಖಂಡರ ಮೂಲಕ ದುರ್ಬಲ ಅಭ್ಯರ್ಥಿಗೆ ಗೋಕಾಕ್‌ನಲ್ಲಿ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Vijaya Karnataka Web congress leader satish jarkiholi attacks on ramesh jarakiholi
ಬೆಳಗಾವಿಯಲ್ಲಿ ಸಹೋದರರ ಸಮರ: ರಮೇಶ್ ವಿರುದ್ಧ ಮತ್ತೆ ಹರಿಹಾಯ್ದ ಸತೀಶ್


ಅನರ್ಹ ಶಾಸಕರ ಪ್ರಕರಣ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ ಗೊತ್ತಾ?

ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೋಕಾಕ್‌ನಲ್ಲಿ ಲಖನ್ ಜಾರಕಿಹೊಳಿ‌ ಸಮರ್ಥ ಅಭ್ಯರ್ಥಿ ಎಂದು ಟಿಕೆಟ್ ಕೊಡಲಾಗುತ್ತಿದೆ. ಹೊರಗಿನವರು ಚುನಾವಣೆ ಮಾಡುವುದು ಗೋಕಾಕ್‌ನಲ್ಲಿ ಬಹಳ ಕಷ್ಟ. ಅಶೋಕ ಪೂಜಾರಿ ಮೂರು ಬಾರಿ ಪ್ರಯತ್ನ ಮಾಡಿ ಸೋತಿದ್ದಾರೆ. ರಮೇಶ್ ಆ್ಯಂಡ್ ಟೀಮ್ ಲಖನ್ ಜಾರಕಿಹೊಳಿ ಬದಲಾಗಿ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ದೆಹಲಿಯಲ್ಲಿರುವ ಕೆಲವು ಕಾಂಗ್ರೆಸ್ ಮುಖಂಡರ ಮೂಲಕ ದುರ್ಬಲ ಅಭ್ಯರ್ಥಿಗೆ ಗೋಕಾಕ್‌ನಲ್ಲಿ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ರಮೇಶ್ ಜಾರಕಿಹೊಳಿ‌ ಅವರ ಪ್ರಯತ್ನ ಯಶಸ್ವಿಯಾಗಲ್ಲ ಎಂದು ಕಿಡಿಕಾರಿದರು.

ಗೋಕಾಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಖಚಿತ ಎಂದ ಅವರು ಇನ್ನೆರಡು ದಿನಗಳೊಳಗೆ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದರು. ಬಿಜೆಪಿ ಸರಕಾರ ಅನರ್ಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡುತ್ತಿದೆ.. ಅನರ್ಹರಿಂದ ಸರಕಾರ ಬಂದಿದ್ದಕ್ಕೆ ಅವರಿಗೆ ಹೆಚ್ಚು ಅನುದಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನ ನಾವು ಸ್ವಾಗತ ಮಾಡಿದ್ದೇವೆ. ಬಹಳ ದಿನಗಳಿಂದ ಚುನಾವಣೆ ಬಂದಾಗ ಇದನ್ನ ಬಳಸಿಕೊಳ್ಳುತ್ತಿದ್ದರು. ಬಿಜೆಪಿಯವರು ಎನೂ ಮಾಡಿಲ್ಲ ಕೋರ್ಟ್ ಅವರ ಕಡೆಯಿಲ್ಲ. ಇದು ಜನರ ತೀರ್ಪು ಇದು, ಯಾರಿಗೂ ಇದರಲ್ಲಿ ಅನ್ಯಾಯ ಆಗಿಲ್ಲ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ