ಪಕ್ಷ ಟಿಕೆಟ್ ನೀಡದೇ ಇದ್ದರೆ ಪಕ್ಷೇತರ ಸ್ಪರ್ಧೆ
ಅಥಣಿ: ''2018ರ ವಿಧಾನಸಭೆ ಚುನಾವಣೆಯಲ್ಲಿ ...
Vijaya Karnataka 16 Nov 2019, 5:00 am
ಅಥಣಿ: ''2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ನನಗೆ ಟಿಕೆಟ್ ನೀಡಿಲ್ಲ. ಉಪ ಚುನಾವಣೆಯಲ್ಲೂಟಿಕೆಟ್ ನೀಡದೇ ಇದ್ದರೆ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ'' ಎಂದು ಹೇಳಿದ ಕಾಂಗ್ರೆಸ್ ಮುಖಂಡ ಸದಾಶಿವ ಬುಟಾಳೆ, ಪಕ್ಷೇತರವಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,'' ನನ್ನನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡ ಮುಖಂಡರು ಅಂದು ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಆದರೆ, ಟಿಕೆಟ್ ನೀಡಿಲ್ಲ. ಈ ಬಾರಿ ಎರಡು ಬಾರಿ ಬೆಂಗಳೂರಿಗೆ ತೆರಳಿ ಪಕ್ಷದ ಮುಖಂಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿ ಬಂದಿದ್ದೇನೆ. ನಾಮಪತ್ರ ಸಲ್ಲಿಸಲು ಎರಡು ದಿನ ಮಾತ್ರ ಬಾಕಿ ಇದೆ. ಆದರೆ, ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಬಸವರಾಜ ಬುಟಾಳೆ, ಜಯವಂತ ದೇಸಾಯಿ, ಮಲ್ಲಿಕಾರ್ಜುನ ಬುಟಾಳೆ, ಸುಭಾಷ ಪಾಟನಕರ, ರಾವ್ಸಾಬ ಐಹೊಳೆ, ಭರತ ಲೋನಾರೆ, ಶ್ರೀಶೈಲ ಬಡಕಂಬಿ ಇತರರು ಇದ್ದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,'' ನನ್ನನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡ ಮುಖಂಡರು ಅಂದು ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಆದರೆ, ಟಿಕೆಟ್ ನೀಡಿಲ್ಲ. ಈ ಬಾರಿ ಎರಡು ಬಾರಿ ಬೆಂಗಳೂರಿಗೆ ತೆರಳಿ ಪಕ್ಷದ ಮುಖಂಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿ ಬಂದಿದ್ದೇನೆ. ನಾಮಪತ್ರ ಸಲ್ಲಿಸಲು ಎರಡು ದಿನ ಮಾತ್ರ ಬಾಕಿ ಇದೆ. ಆದರೆ, ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಬಸವರಾಜ ಬುಟಾಳೆ, ಜಯವಂತ ದೇಸಾಯಿ, ಮಲ್ಲಿಕಾರ್ಜುನ ಬುಟಾಳೆ, ಸುಭಾಷ ಪಾಟನಕರ, ರಾವ್ಸಾಬ ಐಹೊಳೆ, ಭರತ ಲೋನಾರೆ, ಶ್ರೀಶೈಲ ಬಡಕಂಬಿ ಇತರರು ಇದ್ದರು.