ಆ್ಯಪ್ನಗರ

ಮುಂದುವರಿದ ಪುರಸಭೆ ಸದಸ್ಯ ಬೀರಪ್ಪರ ಪ್ರತಿಭಟನೆ

ಅಥಣಿ: ಕಾಮಗಾರಿಗಳ ವಿಳಂಬ ನೀತಿ ಖಂಡಿಸಿ ಪುರಸಭೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪುರಸಭೆ ಸದಸ್ಯ ಬೀರಪ್ಪ ಯಕ್ಕಂಚಿ ಅವರಿಗೆ ಪ್ರತಿಭಟನೆ ಹಿಂಪಡೆಯುವಂತೆ ...

Vijaya Karnataka 10 Jun 2018, 5:00 am
ಅಥಣಿ: ಕಾಮಗಾರಿಗಳ ವಿಳಂಬ ನೀತಿ ಖಂಡಿಸಿ ಪುರಸಭೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪುರಸಭೆ ಸದಸ್ಯ ಬೀರಪ್ಪ ಯಕ್ಕಂಚಿ ಅವರಿಗೆ ಪ್ರತಿಭಟನೆ ಹಿಂಪಡೆಯುವಂತೆ ಶನಿವಾರ ಪುರಸಭೆ ಮುಖ್ಯಾಧಿಕಾರಿ ಎಂ.ಎಸ್‌. ಕವಲಾಪುರೆ ಮನವಿ ಮಾಡಿಕೊಂಡರೂ ಪಟ್ಟು ಬಿಡದ ಬೀರಪ್ಪ ಪ್ರತಿಭಟನೆ ನಾಲ್ಕನೇ ದಿನವೂ ಮುಂದುವರಿಸಿದ್ದಾರೆ.
Vijaya Karnataka Web BEL-9 ATHANI 2


ಪಟ್ಟಣದ ಸ್ಥಳೀಯ ದಡ್ಡಿ ಸಿದ್ದೇಶ್ವರ ದೇವಸ್ಥಾನದ ಸಮೀಪ ವಾರ್ಡ್‌ ನಂ.14 ರಲ್ಲಿ ಪುರಸಭೆಯಿಂದ ನಡೆಯುತ್ತಿರುವ ನಾನಾ ಕಾಮಗಾರಿಗಳು ವಿಳಂಬವಾಗುತ್ತಿವೆ. ಇದರಿಂದ ಸ್ಥಳೀಯರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಕಾಮಗಾರಿಗಳನ್ನು ನಿರ್ಲಕ್ಷ್ಯದಿಂದ ವಿಳಂಬ ಮಾಡುತ್ತಿದ್ದಾರೆ. ಕಾಮಗಾರಿಗಳ ವಿಳಂಬಕ್ಕೆ ಕಾರಣರಾದ ಕಿರಿಯ ಅಭಿಯಂತರ ವರ್ಧಮಾನ ಹುದ್ದಾರ ಅವರನ್ನು ತಕ್ಷಣ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ