ಆ್ಯಪ್ನಗರ

ಹಾಲಿ-ಮಾಜಿ ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ

ರಾಮದುರ್ಗ ಪುರಸಭೆ ಚುನಾವಣೆ ಮತದಾನದ ವೇಳೆ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಮಾತಿನ ...

Vijaya Karnataka 1 Sep 2018, 5:00 am
ರಾಮದುರ್ಗ: ರಾಮದುರ್ಗ ಪುರಸಭೆ ಚುನಾವಣೆ ಮತದಾನದ ವೇಳೆ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆಯಿತು.
Vijaya Karnataka Web BEL-31RD1


ವಿದ್ಯಾಚೇತನ ಶಾಲಾ ಆವರಣದಲ್ಲಿರುವ ಮತಗಟ್ಟೆ ಹಾಗೂ ಸ್ವಾಮಿ ವಿವೇಕಾನಂದ ಶಾಲೆಯಲ್ಲಿರುವ ಮತಗಟ್ಟೆಗೆ ಶಾಸಕ ಮಹಾದೇವಪ್ಪ ಯಾದವಾಡ ಪ್ರವೇಶ ಮಾಡಿದ್ದರಿಂದ ಮಾಜಿ ಶಾಸಕ ಅಶೋಕ ಪಟ್ಟಣ ಆಕ್ಷೇಪ ವ್ಯಕ್ತಪಡಿಸಿದರು.

ಈ ಸಂಬಂಧ ಶಾಸಕ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆಯಿತು. ವಿದ್ಯಾಚೇತನ ಮತಗಟ್ಟೆ ಮುಂದೆ ಸೇರಿದ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಆರೋಪ- ಪ್ರತ್ಯಾರೋಪ ಮಾಡುತ್ತಿದ್ದರು. ಸ್ಥಳದಲ್ಲಿದ್ದ ಚುನಾವಣಾಧಿಕಾರಿ ಆರ್‌.ವಿ.ಕಟ್ಟಿ ಎಲ್ಲರನ್ನೂ ಮತಗಟ್ಟೆ ಆವರಣದಿಂದ ಹೊರ ಹಾಕಿದರು. ಬಳಿಕ ರಸ್ತೆಯಲ್ಲಿ ಕಾರ್ಯಕರ್ತರ ಮಾತಿನ ಚಕಮಕಿ ಮುಂದುವರಿಯಿತು. ಪೊಲೀಸರು ಲಘು ಲಾಠಿ ಪ್ರಹಾರ ಎಲ್ಲರನ್ನೂ ಅಲ್ಲಿಂದ ಚದುರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ