ಆ್ಯಪ್ನಗರ

ಹಾವು ಕಡಿತಕ್ಕೊಳಗಾಗಿದ್ದ ಮಲ್ಲಮ್ಮನ ಬೆಳವಡಿ ಗ್ರಾಮದ ರೈತನಿಗೂ ಕೊರೊನಾ ಸೋಂಕು

ಮಲ್ಲಮ್ಮನ ಬೆಳವಡಿ (ಬೆಳಗಾವಿ): ಹಾವು ಕಚ್ಚಿದ್ದರಿಂದ ಚಿಕಿತ್ಸೆಗೆ ತೆರಳಿದ ರೈತರೊಬ್ಬರಿಗೆ ...

Vijaya Karnataka 10 Jul 2020, 5:00 am
ಮಲ್ಲಮ್ಮನ ಬೆಳವಡಿ (ಬೆಳಗಾವಿ): ಹಾವು ಕಚ್ಚಿದ್ದರಿಂದ ಚಿಕಿತ್ಸೆಗೆ ತೆರಳಿದ ರೈತರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
Vijaya Karnataka Web corona
ಸಾಂದರ್ಭಿಕ


ಮೂಗಬಸವ ಗ್ರಾಮದ 45 ವರ್ಷದ ರೈತ ಸವದತ್ತಿಯಲ್ಲಿಪ್ರಥಮ ಚಿಕಿತ್ಸೆ ಪಡೆದು ನಂತರ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದು ನಾಲ್ಕು ದಿನಗಳ ಬಳಿಕ ಹಾವು ಕಚ್ಚಿದ ಸ್ಥಳದಲ್ಲಿಪುನಃ ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ತೆರಳಿದಾಗ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದ್ದರಿಂದ ಗಂಟಲು ದ್ರವದ ತಪಾಸಣೆ ಮಾಡಲಾಗಿತ್ತು.

ಗುರುವಾರ ವರದಿ ಬಂದಿದ್ದು ಸೋಂಕು ತಗುಲಿರುವುದು ದೃಢಪಟ್ಟಿದೆ. ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿರೈತನಿಗೆ ಕೊರೊನಾ ಚಿಕಿತ್ಸೆ ನೀಡಲಾಗುತ್ತಿದೆ. ರೈತನ ಕುಟುಂಬದ ಸದಸ್ಯರು ಹಾಗೂ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ 8 ಜನರನ್ನು ಗ್ರಾಮದ ಸರಕಾರಿ ಶಾಲೆಯಲ್ಲಿಕ್ವಾರಂಟೈನ್‌ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ