ಆ್ಯಪ್ನಗರ

ಬೆಳಗಾವಿ: ಕೊರೊನಾ ಸಂಕಷ್ಟ, ನೇಕಾರ ಆತ್ಮಹತ್ಯೆ

ಕೊರೊನಾ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೊಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Vijaya Karnataka Web 5 Jun 2020, 1:54 pm
ಬೆಳಗಾವಿ: ಲಾಕ್‌ಡೌನ್‌ನಿಂದ ಕೆಲಸ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಂಕಷ್ಟೊಳಗಾದ ಬೆಳಗಾವಿಯ ನೇಕಾರನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಡಗಾವಿಯಲ್ಲಿ ನಡೆದಿದೆ.
Vijaya Karnataka Web ನೇಕಾರ ಆತ್ಮಹತ್ಯೆ


ನಗರದ ವಡಗಾವಿ ಪ್ರದೇಶದ ಸುಜೀತ್ ಉಪರಿ(38) ನೇಣಿಗೆ ಶರಣಾದ ನೇಕಾರ.

ಬೆಳಗಾವಿಯ ವಡಗಾವಿಯ ಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದು, ಅಕ್ಕಪಕ್ಕದ ಮನೆಗಳಿಗೆ ದುರ್ವಾಸನೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಶುಕ್ರವಾರ ಬೆಳಗ್ಗೆ ತಿಳಿದು ಬಂದಿದೆ.

ಲಾಕ್‌ಡೌನ್ ಹಿನ್ನೆಲೆ ಬೆಳಗಾವಿಯಲ್ಲಿ ವಿದ್ಯುತ್ ಮಗ್ಗಗಳು ಬಂದ್ ಆಗಿದ್ದವು. ಕೆಲಸ ಇಲ್ಲದೇ ಕೈಸಾಲ ಮಾಡಿದ್ದ ನೇಕಾರ ಕಾರ್ಮಿಕ ಸುಜಿತ್ ವಿದ್ಯುತ್ ಮಗ್ಗವಿರುವ ನೇಕಾರರ ಬಳಿ ಕೆಲಸಕ್ಕೆ ಹೋಗುತ್ತಿದ್ದ. ದುಡಿಯಲು ಕೆಲಸವಿಲ್ಲದೇ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದ. ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ ನೇಕಾರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ