ಆ್ಯಪ್ನಗರ

ವಿಶಿಷ್ಟವಾಗಿ ಪ್ರತಿಭಟಿಸಿದ ಪಾಲಿಕೆ ಸದಸ್ಯ ದಿನೇಶ ನಾಶಿಪುಡಿ

ಸತೀಶ್‌ಗೆ ಸಚಿವ ಸ್ಥಾನ ನೀಡುವಂತೆ ನೀರಿನ ಟ್ಯಾಂಕ್‌ನಲ್ಲಿ ಕುಳಿತು ಪ್ರತಿಭಟನೆ

Vijaya Karnataka 13 Jun 2018, 5:00 am
ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ನಗರ ಸೇವಕ ಡಾ.ದಿನೇಶ ನಾಶಿಪುಡಿ ತಮ್ಮ ಬೆಂಬಲಿಗರೊಂದಿಗೆ ವಿಶಿಷ್ಟವಾಗಿ ಪ್ರತಿಭಟಿಸಿದರು.
Vijaya Karnataka Web BLG-1206-2-52-12RAJU-5


ಮಂಗಳವಾರ ಮಹಾನಗರ ಪಾಲಿಕೆ ಕಚೇರಿ ಎದುರು ಸಿಂಥೆಟಿಕ್‌ ಟ್ಯಾಂಕ್‌ ಇಟ್ಟು, ನೀರು ತುಂಬಿ ಅದರಲ್ಲೇ ಅವರು ಪ್ರತಿಭಟನೆಗೆ ಕುಳಿತರು. ಸತೀಶ ಜಾರಕಿಹೊಳಿ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದು, ಪಕ್ಷ ಸಂಘಟಿಸಲು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಬೆಳಗಾವಿಯನ್ನು ರಾಜ್ಯದ 2ನೇ ರಾಜಧಾನಿ ಎಂದು ಕರೆದರೂ ಜಿಲ್ಲೆಯ ಒಬ್ಬರು ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ದೊಡ್ಡ ಜಿಲ್ಲೆಯಾಗಿರುವುದರಿಂದ ಇನ್ನೊಂದು ಸ್ಥಾನವನ್ನು ಸತೀಶ ಜಾರಕಿಹೊಳಿ ಅವರಿಗೆ ನೀಡಬೇಕೆಂದು ಆಗ್ರಹಿಸಿದರು.

ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಅವರು ಪ್ರತಿಭಟನೆ ನಡೆಸಿದರು. ನಗರ ಸೇವಕರಾದ ಜಯಶ್ರೀ ಮಾಳಗಿ, ಸರಳಾ ಹೆರೇಕರ್‌, ರಮೇಶ ಸೊಂಟಕ್ಕಿ, ಸಮಾಜ ಕಾರ್ಯಕರ್ತೆ ಆಯೇಶಾ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ