ಆ್ಯಪ್ನಗರ

ಸಚಿವ ರಮೇಶ್‌ಗೆ ಸಿಎಸ್‌ ಶಾಕ್‌!

ಬೆಳಗಾವಿ: ಕಾರಣವಿಲ್ಲದೆ ಸಚಿವ ...

Vijaya Karnataka 17 Oct 2018, 5:00 am
ಬೆಳಗಾವಿ : ಕಾರಣವಿಲ್ಲದೆ ಸಚಿವ ಸಂಪುಟ ಸಭೆಗೆ ಗೈರಾಗುತ್ತಿರುವ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲು ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದಾರೆ.
Vijaya Karnataka Web BLG-1610-2-52-16MAHESH4


ಸಚಿವ ರಮೇಶ್‌ ಜಾರಕಿಹೊಳಿ ಸಚಿವ ಸಂಪುಟ ಸಭೆಗೆ ಗೈರಾಗುತ್ತಿದ್ದು, ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಕೋರಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಈಚೆಗೆ ಸರಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದರು. ''ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ವಿದೇಶ ಪ್ರವಾಸದಲ್ಲಿದ್ದರೆ ಮಾತ್ರ ಸಚಿವ ಸಂಪುಟ ಸಭೆಗೆ ಗೈರಾಗಬಹುದು. ಆದರೆ, ರಮೇಶ್‌ ಜಾರಕಿಹೊಳಿ ಆರೋಗ್ಯವಾಗಿದ್ದು, ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರೂ ಸಚಿವ ಸಂಪುಟ ಸಭೆಗೆ ಮಾತ್ರ ಗೈರಾಗುತ್ತಿದ್ದಾರೆ. ಹಾಗಾಗಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು'', ಎಂದು ಭೀಮಪ್ಪ ಗಡಾದ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದರು.

ಈ ಪತ್ರದ ಹಿನ್ನೆಲೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ್‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು, ವಿಷಯ ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

''ನನ್ನದೊಂದು ಮುಖ್ಯ ಬೇಡಿಕೆ ಈಡೇರಬೇಕಿರುವುದರಿಂದ ದೇವರ ಮೊರೆ ಹೋಗಿದ್ದೇನೆ. ಬೇಡಿಕೆ ಈಡೇರುವವರೆಗೂ ಸರಕಾರದ ವಾಹನ ಬಳಕೆ ಮಾಡುವುದಿಲ್ಲ. ಸಚಿವ ಸಂಪುಟ ಸಭೆಗೂ ಹಾಜರಾಗುವುದಿಲ್ಲ'', ಎಂದು ಈಚೆಗೆ ಸ್ವತಃ ರಮೇಶ್‌ ಜಾರಕಿಹೊಳಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ