ಆ್ಯಪ್ನಗರ

ಚಾಲ್ತಿಯಲ್ಲಿದೆ ಜಿಲ್ಲೆ ವಿಭಜನೆ ಪ್ರಕ್ರಿಯೆ

ಬೆಳಗಾವಿ: ''ಬೆಳಗಾವಿ ಜಿಲ್ಲೆ ವಿಭಜನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ...

Vijaya Karnataka 16 Aug 2018, 5:00 am
ಬೆಳಗಾವಿ: ''ಬೆಳಗಾವಿ ಜಿಲ್ಲೆ ವಿಭಜನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅದಕ್ಕಿಂತ ಮೊದಲು ಜಿಲ್ಲೆಯಲ್ಲಿ ಹೊಸ ತಾಲೂಕುಗಳ ರಚನೆಯಾಗಬೇಕು. ತಾಲೂಕು ಘೋಷಣೆ ಮಾಡಬೇಕೆಂಬ ಬೇಡಿಕೆ ಜನರಿಂದಲೂ ಇದೆ. ಅದು ಅಗತ್ಯವೂ ಹೌದು. ನಾನು ಗೋಕಾಕ ಕ್ಷೇತ್ರದ ಶಾಸಕನಾಗಿದ್ದರಿಂದ ಗೋಕಾಕ ಜಿಲ್ಲೆ ರಚನೆ ಮಾಡಲೇ ಬೇಕು ಎನ್ನುವ ಆಗ್ರಹ ನನ್ನದು'' ಎಂದು ಪೌರಾಡಳಿತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
Vijaya Karnataka Web currently the district division process
ಚಾಲ್ತಿಯಲ್ಲಿದೆ ಜಿಲ್ಲೆ ವಿಭಜನೆ ಪ್ರಕ್ರಿಯೆ


ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಹೈ ಕಮಾಂಡ್‌ ನಿರ್ಧರಿಸುತ್ತದೆ. ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಇವರಲ್ಲಿ ಯಾರೇ ಅಭ್ಯರ್ಥಿಯಾದರೂ ನನ್ನ ಸಹಮತ ಇದೆ. ಬೆಳಗಾವಿಗೆ ಎರಡನೇ ರಾಜಧಾನಿ ಮಾನ್ಯತೆ ನೀಡುವುದಕ್ಕೆ ಬೆಂಬಲವಿದೆ. ಆದರೆ, ಅದಕ್ಕೆ ಕಾನೂನು ಮಾನ್ಯತೆ ಬಗ್ಗೆ ಅರಿವಿಲ್ಲ ಎಂದರು.

ಬೆಳಗಾವಿಯಲ್ಲಿ ಮಳೆಗೆ ರಸ್ತೆಗಳ ಡಾಂಬರು ಕಿತ್ತು ಹೋಗುತ್ತಿರುವ ಬಗ್ಗೆ ದೂರುಗಳು, ಪತ್ರಗಳು ಬಂದಿವೆ. ತಾಂತ್ರಿಕ ಅಧಿಕಾರಿಗಳಿಂದ ಸಲಹೆ ಪಡೆದು ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಸದ್ಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ. ಅದು ಮುಗಿದ ತಕ್ಷಣ ಅಂದರೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸಚಿವರು ತಿಳಿಸಿದರು.

ಮುಖಂಡರ ಜತೆ ಚರ್ಚಿಸಿ ಮಹದಾಯಿ ತೀರ್ಮಾನ:
''ಮಹದಾಯಿ ನ್ಯಾಯಾಧಿಕರಣದ ತೀರ್ಪು ತಾತ್ಕಾಲಿಕ ರಿಲೀಪ್‌ ಕೊಟ್ಟಿದ್ದು ರೈತರಿಗೆ ಸಂತಸ ತಂದಿದೆ. ಅವರ ಅಭಿಪ್ರಾಯವೇ ನಮ್ಮದು. ಮುಂದೇನು ಮಾಡಬೇಕು ಎಂಬುದನ್ನು ಮುಖಂಡರೆಲ್ಲ ಸೇರಿ ನಿರ್ಧಾರ ಕೈಗೊಳ್ಳುತ್ತೇವೆ'' ಎಂದು ರಮೇಶ ಜಾರಕಿಹೊಳಿ ಹೇಳಿದರು. ಮಹದಾಯಿ ತೀರ್ಪಿನ ಬಗ್ಗೆ ಮೈತ್ರಿ ಸರಕಾರದ ಮುಖಂಡರ ಭಿನ್ನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಲೋಕೋಪಯೋಗಿ ಇಲಾಖೆಯ ಕೆಶಿಪ್‌ ಕಚೇರಿ ಹಾಸನಕ್ಕೆ ಸ್ಥಳಾಂತರಿಸುವ ಪ್ರಯತ್ನ ನಡೆದ ಮಾತ್ರಕ್ಕೆ, ಪೌರಾಡಳಿತ ಇಲಾಖೆ ಕಚೇರಿ ಸ್ಥಳಾಂತರಿಸಲು ಆಗುವುದಿಲ್ಲ. ನಾನು ಅಖಂಡ ಕರ್ನಾಟಕವನ್ನು ಪ್ರೀತಿಸುತ್ತೇನೆ. ಆದರೆ, ಕಚೇರಿ ಹಾಸನಕ್ಕೆ ಸ್ಥಳಾಂತರವಾಗದಂತೆ ಶಾಸಕ ಸತೀಶ ಜಾರಕಿಹೊಳಿ ಅವರು ನೀಡಿರುವ ಹೇಳಿಕೆಗೆ ತಮ್ಮ ಬೆಂಬಲ ಇದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ