ಆ್ಯಪ್ನಗರ

ಮನೆಗಳಿಗೆ ಹಾನಿ: ಶಾಸಕಿ ಲಕ್ಷ್ಮೇ ಹೆಬ್ಬಾಳಕರ ಪರಿಶೀಲನೆ

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರ ಕುಟ್ಟಲವಾಡಿ ಸೇರಿದಂತೆ 15ಕ್ಕೂ ಹೆಚ್ಚು ಗ್ರಾಮಗಳಿಗೆ ಶಾಸಕಿ ಲಕ್ಷ್ಮೇ ಹೆಬ್ಬಾಳಕರ ಅವರು ಅಧಿಕಾರಿಗಳೊಂದಿಗೆ ಭೇಟಿ ...

Vijaya Karnataka 29 Apr 2019, 5:00 am
ಬೆಳಗಾವಿ : ಗ್ರಾಮೀಣ ವಿಧಾನಸಭಾ ಕ್ಷೇತ್ರ ಕುಟ್ಟಲವಾಡಿ ಸೇರಿದಂತೆ 15ಕ್ಕೂ ಹೆಚ್ಚು ಗ್ರಾಮಗಳಿಗೆ ಶಾಸಕಿ ಲಕ್ಷ್ಮೇ ಹೆಬ್ಬಾಳಕರ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಳೆಗಾಳಿಗೆ ಹಾನಿಯಾಗಿರುವ ಮನೆಗಳನ್ನು ಪರಿಶೀಲಿಸಿದರು.
Vijaya Karnataka Web BEL-28 LBS 3


ಈ ವೇಳೆ ಮಾತನಾಡಿದ ಲಕ್ಷ್ಮೇ ಹೆಬ್ಬಾಳಕರ ಅವರು, ಭಾರಿ ಮಳೆಗಾಳಿಗೆ ಅನೇಕ ಮನೆಗಳ ಚಾವಣಿ ಹಾರಿ ಹೋಗಿರುವ ಮನೆಯ ಮಾಲೀಕರಿಗೆ ಸರಕಾರದಿಂದ ಸಹಾಯ ಧನ ನೀಡಲಾಗುವುದು. ಮಳೆಗೆ ಹಾನಿಯಾಗಿರುವ ಮನೆಗಳ ಮಾಹಿತಿಯನ್ನು ಕೂಡಲೇ ಕಲೆಹಾಕುವಂತೆ ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯುತ್‌ ಕಂಬ, ತಂತಿಗಳು ಹಾನಿಯಾಗಿರುವ ಪ್ರದೇಶವನ್ನು ಗುರುತಿಸಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಂದ ಸರಿಪಡಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ಯುವರಾಜ ಕದಂ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ