ಆ್ಯಪ್ನಗರ

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕರಾಳ ದಿನಾಚರಣೆ

ಚಿಕ್ಕೋಡಿ: ದೇಶಾದ್ಯಂತ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಚಿಕ್ಕೋಡಿ ಭಾರತೀಯ ವೈದ್ಯಕೀಯ ಸಂಘದಿಂದ ಶುಕ್ರವಾರ ಕರಾಳ ದಿನ ಆಚರಿಸಿ ಪ್ರತಿಭಟನೆ ...

Vijaya Karnataka 15 Jun 2019, 5:00 am
ಚಿಕ್ಕೋಡಿ : ದೇಶಾದ್ಯಂತ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಚಿಕ್ಕೋಡಿ ಭಾರತೀಯ ವೈದ್ಯಕೀಯ ಸಂಘದಿಂದ ಶುಕ್ರವಾರ ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ನಂತರ ತಹಸೀಲ್ದಾರ್‌ ಡಾ. ಸಂತೋಷಕುಮಾರ್‌ ಬಿರಾದವ ಅವರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
Vijaya Karnataka Web BEL-14CKD1


ಕಲ್ಕತ್ತಾದ ನೀಲರತನ ಸರಕಾರಿ ಮೆಡಿಕಲ್‌ ಕಾಲೇಜಿನ ಕಿರಿಯ ವೈದ್ಯ ಡಾ. ಪರಿಭಾ ಮುಖರ್ಜಿ ಅವರನ್ನು ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ ಕೆಲವರು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ವೈದ್ಯರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ನಡೆಯುವ ದಾಳಿಗಳ ವಿರುದ್ಧ ಶೀಘ್ರ ಕಠಿಣ ಕಾನೂನು ಜಾರಿಗೊಳಿಸಬೇಕು. ಕನಿಷ್ಟ 7 ವರ್ಷ ಜೈಲು ಶಿಕ್ಷೆಯಾಗಬೇಕು. ಪೋಕ್ಸೋ ಕಾಯ್ದೆಯಲ್ಲಿರುವಂತೆ ಆರೋಪಿಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಿ ಆರೋಪಿಗಳಿಗೆ ತ್ರಿರಿತ ಬಂಧನ ಮತ್ತು ಶಿಕ್ಷೆ ನೀಡಬೇಕು. ಆಸ್ಪತ್ರೆಗಳಿರುವ ಪ್ರದೇಶಗಳನ್ನು ಪ್ರತ್ಯೇಕ ವಲಯಗಳನ್ನಾಗಿ ಗುರುತಿಸಿ ಸೂಕ್ತ ರಕ್ಷಣೆ ಆಯಾ ರಾಜ್ಯ ಸರಕಾರಗಳೇ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಆರೋಗ್ಯ ಸೇವೆಗಳನ್ನು ನೀಡುವ ಸಂಸ್ಥೆಗಳು ಹಾಗೂ ವೈದ್ಯರ ಮೇಲೆ ನಡೆಯುವ ದಾಳಿಯನ್ನು ಸಹಿಸಲು ಸಾಧ್ಯವೇ ಇಲ್ಲ. ಜಾಗತಿಕ ವೈದ್ಯಕೀಯ ಸಂಘವೂ ಈ ನಿಟ್ಟಿನಲ್ಲಿ ಕಾಯ್ದೆ ರೂಪಿಸಿದ್ದು, ಎಲ್ಲ ದೇಶಗಳಿಗೆ ಈ ಕುರಿತು ಸಶಕ್ತ ಕಾನೂನು ತರಲು ಮನವಿ ಮಾಡಿದೆ. ಇಂತಹ ಹಲ್ಲೆಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಮಾನಸಿಕ ಒತ್ತಡ, ಜೀವಭಯವನ್ನು ವಿವರಿಸಲು ಸಾಧ್ಯವಿಲ್ಲ. ವೈದ್ಯರ ಮೇಲಿನ ಹಲ್ಲೆಯು ಅಪರೋಕ್ಷವಾಗಿ ಸಾರ್ವಜನಿಕರ ಆರೋಗ್ಯ ರಕ್ಷಣೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಡಾ. ಸಂಜೀವ ಪಾಟೀಲ, ಡಾ. ಅಜೀತ ಚರಾಟೆ, ಡಾ. ಸಂದ್ಯಾ ಪಾಟೀಲ, ಡಾ. ರಾಜೇಂದ್ರ ಸಲಗರೆ, ಡಾ. ಶ್ಯಾಮ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ