ಆ್ಯಪ್ನಗರ

ಅಧಿಕಾರಿಗಳ ಗುರುತಿಸಿ ವರದಿ ನೀಡಲು ಡಿಸಿ ಆದೇಶ

ಬೆಳಗಾವಿ: ತಾಲೂಕಿನ ಯಳ್ಳೂರು ಗ್ರಾಮದ ರಾಜಹಂಸಗಡ ...

Vijaya Karnataka 2 Feb 2020, 5:00 am
ಬೆಳಗಾವಿ: ತಾಲೂಕಿನ ಯಳ್ಳೂರು ಗ್ರಾಮದ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಚಾಲನೆ ನೀಡುವ ಸರಕಾರದ ಅಧಿಕೃತ ಕಾರ್ಯಕ್ರಮವನ್ನು ಮರಾಠಿಯಲ್ಲಿ ಆಯೋಜಿಸಿದ ಅಧಿಕಾರಿಗಳನ್ನು ಗುರುತಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರಿಗೆ ಆದೇಶಿಸಿದ್ದಾರೆ.
Vijaya Karnataka Web 1DC1055422
ಡಿಸಿ ಆದೇಶ ಪತ್ರದ ಪ್ರತಿ.


ಜ.27 ರಂದು ರಾಜಹಂಸಗಡದ ಕೋಟೆ ಮೇಲೆ ಬಹು ಎತ್ತರದ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಕೋಟೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮದ ವೇದಿಕೆ ಹಿಂಭಾಗದ ಬ್ಯಾನರನ್ನು ಮರಾಠಿ ಭಾಷೆಯೊಂದರಲ್ಲೇ ಮುದ್ರಿಸಿದ್ದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಕುರಿತು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಪತ್ರ ಬರೆದಿತ್ತು. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡ ಕನ್ನಡ ಭಾಷಾ ಅನುಷ್ಠಾನದಲ್ಲಿವಿಮುಖ ನೀತಿ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿತ್ತು.

ಈ ಹಿನ್ನೆಲೆಯಲ್ಲಿಬೆಳಗಾವಿ ಉಪ ವಿಭಾಗಾಧಿಕಾರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಜಂಟಿ ತನಿಖೆ ನಡೆಸಿ ಕಾರ್ಯಕ್ರಮ ಆಯೋಜಿಸಿದ ಅಧಿಕಾರಿಗಳ ಪೂರ್ಣ ಮಾಹಿತಿ ಒದಗಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ