ಆ್ಯಪ್ನಗರ

ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ತರಾಟೆ

ಬೆಳಗಾವಿ: ''ಚುನಾವಣೆ ನೆಪ ಹೇಳುತ್ತಿದ್ದೀರಿ...

Vijaya Karnataka 6 Jul 2018, 5:00 am
ಬೆಳಗಾವಿ: ''ಚುನಾವಣೆ ನೆಪ ಹೇಳುತ್ತಿದ್ದೀರಿ. ಚುನಾವಣೆ ಮುಗಿದು ತಿಂಗಳು ಕಳೆದರೂ ಇನ್ನೂ ಕಾಮಗಾರಿ ಆರಂಭಗೊಂಡಿಲ್ಲ'', ಎಂದು ಡಿಸಿ ಜಿಯಾವುಲ್ಲಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಗುರುವಾರ ಆಯೋಜಿಸಲಾಗಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು.
Vijaya Karnataka Web BEL-5 LBS 1


''ಯೋಜನೆಯಡಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ಇರುವ ಪ್ರದೇಶಗಳಲ್ಲಿ 150 ಕಾಮಗಾರಿ ತೆಗೆದುಕೊಳ್ಳಲಾಗಿತ್ತು. ಆದರೆ, 100 ಕಾಮಗಾರಿಗಳು ಮಾತ್ರ ಆರಂಭವಾಗಿವೆ. ಇನ್ನುಳಿದ 50 ಕಾಮಗಾರಿಗಳನ್ನು ಆರಂಭಿಸಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬುವುದು ಸ್ಪಷ್ಟವಾಗಿದೆ. ಸಮಸ್ಯೆ ಇರುವ ಕಾಮಗಾರಿ ಹೊರತುಪಡಿಸಿ ಉಳಿದ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು'', ಎಂದು ಡಿಸಿ ಸೂಚಿಸಿದರು.

ನಾನೇ ಪರಿಶೀಲಿಸುವೆ: ''ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಮಗಾರಿಗಳನ್ನು ಖುದ್ದಾಗಿ ನಾನೇ ಪರಿಶೀಲನೆ ಮಾಡುತ್ತೇನೆ. ಆದಷ್ಟು ಸಿಸಿ ರಸ್ತೆ ನಿರ್ಮಾಣ ಮಾಡಬೇಕು. ಕೆಲವು ಕಡೆ ಸ್ಥಳೀಯರು ಸಿಸಿ ರಸ್ತೆ ಬದಲಾಗಿ ಕಾಂಪೌಂಡ್‌ ನಿರ್ಮಾಣ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ, ಯೋಜನೆಯಲ್ಲಿ ಬೇರೆ ಕಾಮಗಾರಿ ಕೈಗೊಳ್ಳಲು ಅವಕಾಶ ಇಲ್ಲ'', ಎಂದು ಡಿಸಿ ಸ್ಪಷ್ಟಪಡಿಸಿದರು.

ಜಿಪಂ ಸಿಇಒ ಆರ್‌. ರಾಮಚಂದ್ರನ್‌, ಅಲ್ಪಸಖ್ಯಾಂತರ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಅನವಾಲ, ಡಿಎಚ್‌ಒ ಅಪ್ಪಾಸಾಬ ನರಹಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ