ಆ್ಯಪ್ನಗರ

ಮಲಪ್ರಭಾ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಎಂಕೆಹುಬ್ಬಳ್ಳಿ: ಪಟ್ಟಣದ ಬಳಿಯ ಮಲಪ್ರಭಾ ನದಿಯಲ್ಲಿ ಭಾನುವಾರ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ...

Vijaya Karnataka 19 Aug 2019, 5:00 am
ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಬಳಿಯ ಮಲಪ್ರಭಾ ನದಿಯಲ್ಲಿ ಭಾನುವಾರ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.
Vijaya Karnataka Web dead body found in malaprabha river
ಮಲಪ್ರಭಾ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ


ಧಾರವಾಡ ಜಿಲ್ಲೆಯ ಸತ್ತೂರ ಗ್ರಾಮದ ಈರಪ್ಪ ಶಿವಜಾತಪ್ಪ ಪಟ್ಟಣಶೆಟ್ಟಿ (63) ಮೃತ ವ್ಯಕ್ತಿ. ಆ. 16ರಂದು ಪಟ್ಟಣದ ಬಳಿಯ ಗಂಗಾಂಬಿಕಾ ಐಕ್ಯಮಂಟಪಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಕಾಣೆಯಾಗಿದ್ದರು. ಭಾನುವಾರ ಮಲಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನದಿಯಲ್ಲಿ ಕೈಕಾಲು ತೊಳೆಯಲು ಹೋದಾಗ ಕಾಲು ಜಾರಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಪಟ್ಟಣದ ಉಪ ಪೊಲೀಸ್‌ ಠಾಣೆ ಎಎಸ್‌ಐ ಎಂ.ಎಫ್‌. ಗಿರಿಯಾಲ, ಎಸ್‌ .ಎಸ್‌. ಕಾಜಗಾರ, ಶಿವಾನಂದ ಮಾನ್ಯದಮಠ ಭೇಟಿ ನೀಡಿ ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ