ಬೆಳಗಾವಿ: ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ತಿಲಾರಿ ಡ್ಯಾಂಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿಯ ಯುವಕನೊಬ್ಬ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ವಿನಯ ಕಾಂಬಳೆ (18) ಎಂದು ಗುರುತಿಸಲಾಗಿದೆ. ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದ ವಿನಯ ವಾರ್ಷಿಕ ಪರೀಕ್ಷೆ ಮುಗಿದ ಖುಷಿಯಲ್ಲಿ ಸ್ನೇಹಿತರೊಂದಿಗೆ ಬೆಳಗ್ಗೆ ತಿಲಾರಿ ಡ್ಯಾಂಗೆ ಹೋಗಿದ್ದ. ಅರಣ್ಯ ಇಲಾಖೆ ಮತ್ತು ಮಹಾರಾಷ್ಟ್ರದ ಅಧಿಕಾರಿಗಳು ದೋಣಿ ಮೂಲಕ ಕಾರ್ಯಾಚರಣೆ ನಡೆಸಿ ನೀರಿನಿಂದ ಶವ ಹೊರತೆಗೆದಿದ್ದಾರೆ.
ತಿಲಾರಿ ಡ್ಯಾಂನಲ್ಲಿ ಮುಳುಗಿ ಯುವಕ ಸಾವು
ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ತಿಲಾರಿ ಡ್ಯಾಂಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿಯ ಯುವಕನೊಬ್ಬ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ...
Vijaya Karnataka Web 15 Mar 2019, 5:00 am