ಆ್ಯಪ್ನಗರ

ಸಾಲಬಾಧೆ: ರೈತ ಮಹಿಳೆ ಆತ್ಮಹತ್ಯೆ

ಸಾಲಬಾಧೆ ತಾಳದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದ ನಿವಾಸಿ ಶೋಭಾ ಯಲ್ಲಪ್ಪ ಭಜಂತ್ರಿ (34) ಆತ್ಮಹತ್ಯೆ ಮಾಡಿಕೊಂಡವರು...

Vijaya Karnataka 10 Feb 2019, 5:00 am
ಬೆಳಗಾವಿ: ಸಾಲಬಾಧೆ ತಾಳದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದ ನಿವಾಸಿ ಶೋಭಾ ಯಲ್ಲಪ್ಪ ಭಜಂತ್ರಿ (34) ಆತ್ಮಹತ್ಯೆ ಮಾಡಿಕೊಂಡವರು. ಸಹಕಾರಿ ಸಂಘ, ಸೊಸೈಟಿ, ಬ್ಯಾಂಕ್‌ಗಳಲ್ಲಿ ಇವರು 1.20 ಲಕ್ಷ ರೂ. ಸಾಲ ಹೊಂದಿದ್ದರು. ಮಳೆ ಕೈಕೊಟ್ಟು ಬೆಳೆ ಬಾರದ್ದರಿಂದ ಆದಾಯವಿಲ್ಲದೆ ಅವರಿಗೆ ಸಾಲ ತೀರಿಸಲಾಗಲಿಲ್ಲ. ಈ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web BEL-9 LBS 14

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ