ಆ್ಯಪ್ನಗರ

ಸಾಲ ಬಾಧೆ: ರೈತ ಆತ್ಮಹತ್ಯೆ

ಹುಕ್ಕೇರಿ ತಾಲೂಕಿನ ನಿಡಸೋಸಿಯ ರೈತರೊಬ್ಬರು ಸಾಲಬಾಧೆ ತಾಳದೆ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಿವಾನಂದ ಶಂಕರ ವಾಣಿ (33) ಮೃತರು...

Vijaya Karnataka 6 Jan 2019, 5:00 am
ಸಂಕೇಶ್ವರ (ಬೆಳಗಾವಿ): ಹುಕ್ಕೇರಿ ತಾಲೂಕಿನ ನಿಡಸೋಸಿಯ ರೈತರೊಬ್ಬರು ಸಾಲಬಾಧೆ ತಾಳದೆ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಾನಂದ ಶಂಕರ ವಾಣಿ (33) ಮೃತರು. ಇವರು ರಾಷ್ಟ್ರೀಕೃತ ಸೇರಿ ನಾನಾ ಖಾಸಗಿ ಬ್ಯಾಂಕು, ಸಹಕಾರ ಸಂಘಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ-ತಾಯಿ ಇದ್ದಾರೆ. ಗ್ರಾಮ ಲೆಕ್ಕಾಧಿಕಾರಿ ವಿಜಯ ಸಂಕಪ್ಪ, ಸಹಾಯಕ ಕೃಷಿ ಅಧಿಕಾರಿ ವೈ.ಎಂ. ನಂದಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web BEL-05-SANK-01

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ