ಆ್ಯಪ್ನಗರ

ಮೂಡಲಗಿ, ಗೋಕಾಕನ್ನು ಬರಗಾಲ ಪೀಡಿತ ಎಂದು ಘೋಷಿಸಿ

ಗೋಕಾಕ: ಮೂಡಲಗಿ ಹಾಗೂ ಗೋಕಾಕ ತಾಲೂಕುಗಳನ್ನು ಬರಪೀಡಿತ ಎಂಬುದಾಗಿ ಘೋಷಿಸಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಭೀಮಶಿ ಗದಾಡಿ ಆಗ್ರಹಿಸಿದ್ದಾರೆ...

Vijaya Karnataka 1 Feb 2019, 5:00 am
ಗೋಕಾಕ: ಮೂಡಲಗಿ ಹಾಗೂ ಗೋಕಾಕ ತಾಲೂಕುಗಳನ್ನು ಬರಪೀಡಿತ ಎಂಬುದಾಗಿ ಘೋಷಿಸಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಭೀಮಶಿ ಗದಾಡಿ ಆಗ್ರಹಿಸಿದ್ದಾರೆ.
Vijaya Karnataka Web BEL-31GOK2


ಅವರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ರೈತ ಸಂಘದ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಮೂಡಲಗಿ ಹಾಗೂ ಗೋಕಾಕ ತಾಲೂಕುಗಳು ನೀರಾವರಿ ಪ್ರದೇಶಗಳಾಗಿದ್ದರೂ ಕಾಲುವೆಗಳ ಅಸಮರ್ಪಕ ನಿರ್ವಹಣೆ, ಸರಿಯಾದ ಸಮಯಕ್ಕೆ ಮಳೆಯಾಗದಿರುವುದು ಹಾಗೂ ವಿದ್ಯುತ್‌ ಕೊರತೆಯಿಂದ ರೈತ ಬೆಳೆದ ಬೆಳೆಗಳು ಒಣಗಿ ಹೋಗಿವೆ. ಘಟಪ್ರಭಾ ಎಡ ಹಾಗೂ ಬಲದಂಡೆ ಕಾಲುವೆಗಳ ಸಮೀಪದ ಗ್ರಾಮಗಳು ಅಚ್ಚುಕಟ್ಟು ಪ್ರದೇಶವೆಂದು ಘೋಷಣೆಯಾಗಿದ್ದರೂ ಕಾಲುವೆಗಳ ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದಾಗಿ ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪುತ್ತಿಲ್ಲ. ಈಗ ಉಳಿದಿರುವ ಅಲ್ಪ-ಸ್ಪಲ್ಪ ಬೆಳೆಗಳನ್ನಾದರು ಉಳಿಸಿಕೊಳ್ಳಲು ನೀರಾವರಿ ಇಲಾಖೆಯ ಅಧಿಕಾರಿ ಕೂಡಲೇ ಘಟಪ್ರಭಾ ಎಡ ಹಾಗೂ ಬಲದಂಡೆ ನೀರನ್ನು ಹರಿಸಿ ರೈತರನ್ನು ಉಳಿಸಬೇಕು. ಎಲ್ಲ ಗ್ರಾಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಬೇಕು

ಹಸಿರು ಸೇನೆ ಜಿಲ್ಲಾಧ್ಯಕ್ಷ ಗಣಪತಿ ಈಳಿಗೇರ ಮಾತನಾಡಿ, ರೈತ ಬೆಳೆದ ಕಬ್ಬಿಗೆ ಸರಿಯಾದ ಬೆಲೆ ನೀಡಬೇಕು. ಪಡಿತರ ಚೀಟಿ ವಿತರಿಸಲು ದಿನಕ್ಕೊಂದು ಕಾಯ್ದೆ ತರುತ್ತಿರುವ ಇಲಾಖೆ ಇಲಾಖೆಯ ಅಧಿಕಾರಿಗಳು ರೈತರನ್ನು ಪ್ರತಿ ಸಲ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದರು.

ಸಭೆಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಎಸ್‌.ಎಂ. ಬಿಳ್ಳೂರ, ಮುಖಂಡರಾದ ಸತ್ತೆಪ್ಪ ಮಲ್ಲಾಪುರೆ, ಭರಮು ಖೇಮಲಾಪುರೆ, ಗೋಪಾಲ ಕುಕನೂರ, ಮಾರುತಿ ನಾಯ್ಕ, ಮುತ್ತೆಪ್ಪ ಕುರುಬರ, ಮಹಾದೇವ ಗೋಡೇರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ