ಆ್ಯಪ್ನಗರ

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಉದ್ದೇಶಪೂರ್ವಕವಾಗಿ ನನ್ನ ಹೆಸರು ಬಳಕೆ; ಸತೀಶ್‌ ಜಾರಕಿಹೊಳಿ

ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ಕುಳಿತು ಅಭ್ಯರ್ಥಿ ಆಯ್ಕೆ ಬಗ್ಗೆ ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಕಮಿಟಿ ಇದೆ. ಇನ್ನೊಂದು ಬಾರಿ ಸಭೆ ನಡೆಸಿದ ನಂತರ ಆಯ್ಕೆ ಮಾಡುವ ಅಭ್ಯರ್ಥಿಯೇ ಅಂತಿಮ. ಜಿಲ್ಲೆಯ ಶಾಸಕರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚಿಸಿ ಸೂಕ್ತ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದರು.

Vijaya Karnataka Web 12 Dec 2020, 8:32 am
ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ ಟಿಕೆಟ್‌ ವಿಚಾರವಾಗಿ ನನ್ನ ಹೆಸರು ಕೇಳಿ ಬಂದಿದ್ದು, ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ. ಜತೆಗೆ ಸಹಜವಾಗಿಯೂ ಹೆಸರು ಕೇಳಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ತಿಳಿಸಿದರು.
Vijaya Karnataka Web sathish jarkiholi


ಕಬ್ಬು ಬೆಳೆಗಾರರಿಂದ ಸುಲಿಗೆ ಮಾಡುವ ದಂಧೆ ಶುರು; ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ ರೈತರು..!

ನಗರದ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಳಿತು ಅಭ್ಯರ್ಥಿ ಆಯ್ಕೆ ಬಗ್ಗೆ ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಕಮಿಟಿ ಇದೆ. ಇನ್ನೊಂದು ಬಾರಿ ಸಭೆ ನಡೆಸಿದ ನಂತರ ಆಯ್ಕೆ ಮಾಡುವ ಅಭ್ಯರ್ಥಿಯೇ ಅಂತಿಮ. ಜಿಲ್ಲೆಯ ಶಾಸಕರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚಿಸಿ ಸೂಕ್ತ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದರು.

ಬೆಳಗಾವಿಯ ಘಷ್ಟೊಳ್ಳಿ-ಚಣಕೆಬೈಲ್‌ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ರಾಜ್ಯ ಸರಕಾರ ಸಾರಿಗೆ ಸಂಸ್ಥೆಯ ನೌಕರರ ಮನವಿಗೆ ಸ್ಪಂದಿಸಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕು. ಪ್ರತಿ ತಿಂಗಳು ಸರಿಯಾಗಿ ವೇತನ ನೀಡುವುದು, ಸರಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ನೌಕರರ ಬೇಡಿಕೆಗಳನ್ನು ಸಂಧಾನದ ಮೂಲಕ ಬಗೆಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಮರಾಠ ಪ್ರಾಧಿಕಾರ ರಚನೆ ಬೆನ್ನಲ್ಲೇ ಬಾಲ ಬಿಚ್ಚಿದ ಎಂಇಎಸ್‌; ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

ಹರಾಜಿಗೆ ಅವಕಾಶವಿಲ್ಲ: ಗ್ರಾಪಂ ಚುನಾವಣೆಯಲ್ಲಿ ಸದಸ್ಯ ಸ್ಥಾನಗಳ ಹರಾಜು ಹಾಕಲು ಅವಕಾಶವಿಲ್ಲ. ಆ ರೀತಿ ಮಾಡಲಾಗದು. ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಹರಾಜು ಹಾಕಿರುವ ಪ್ರಕರಣ ಬೆಳಕಿಗೆ ಬಂದಿವೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದುಡ್ಡು ತೆಗೆದುಕೊಂಡು ಆಯ್ಕೆ ಮಾಡುವುದು ಸರಿಯಾದ ಕ್ರಮವಲ್ಲ. ಚುನಾವಣೆ ನಡೆಯಬೇಕು. ಇಲ್ಲವೇ ಅವಿರೋಧ ಆಯ್ಕೆಗೆ ಮಾತ್ರ ಅವಕಾಶವಿದೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ