ಆ್ಯಪ್ನಗರ

ಬೇಟೆಗಾರರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

ಹಿರೇಬಾಗೇವಾಡಿ: ಇಲ್ಲಿನ ಲಕ್ಷ್ಮೀ ದೇವಿ ಮಂದಿರದಲ್ಲಿ ಬುಧವಾರ 2019-20ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ ಜರುಗಿತು...

Vijaya Karnataka 13 Jun 2019, 5:00 am
ಹಿರೇಬಾಗೇವಾಡಿ: ಇಲ್ಲಿನ ಲಕ್ಷ್ಮೀ ದೇವಿ ಮಂದಿರದಲ್ಲಿ ಬುಧವಾರ 2019-20ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ ಜರುಗಿತು.
Vijaya Karnataka Web BLG-1206-2-52-12HBD1


ಸಮೀಪದ ಗುಡ್ಡದ ಮಲ್ಲಪ್ಪನ ಗುಡ್ಡದಲ್ಲಿ ಪ್ರಾಣಿ-ಪಕ್ಷಿಗಳ ಬೇಟೆ ಸೇರಿದಂತೆ ಮರಗಳ ಕಟಾವು ಸಂಬಂಧ ಈ ಹಿಂದೆಯೇ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದರು. ಇದೇ ವೇಳೆ ವಲಯ ಅರಣ್ಯಾಧಿಕಾರಿ ಸಚಿನ ಹುಲಮನಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ಸಮರ್ಪಕ ಸೇವೆ ದೊರೆಯುತ್ತಿಲ್ಲ. ಹೆರಿಗೆಗೆ ದಾಖಲಾದ ಗರ್ಭಿಣಿಯರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸುತ್ತಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತದೆ ಎಂದು ಸಾರ್ವಜನಿಕರೂ ದೂರಿದರು.

ಗ್ರಾಪಂನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಸಭೆಯಲ್ಲಿ ಚರ್ಚಿಸಲಾಯಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಗ್ರಾಪಂ ಅಧ್ಯಕ್ಷೆ ಕಲಾವತಿ ಧರೆಣ್ಣವರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯೆ ಗೌರವ್ವ ಪಾಟೀಲ, ಪಿಡಿಒ ಉಷಾ ಸಾವಳಗಿ, ಕಾರ್ಯದರ್ಶಿ ಎಸ್‌.ಎಸ್‌. ಮರಡಿ, ಗ್ರಾಮ ಲೆಕ್ಕಾಧಿಕಾರಿ ಅನಿಲ ಕಮ್ಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ