ಆ್ಯಪ್ನಗರ

ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹ

ಮುರಗೋಡ: ಮುರಗೋಡ ಹೋಬಳಿ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್‌ ಸರಬರಾಜು ಮಾಡಬೇಕು ಹಾಗೂ ಹೊಲ, ಗದ್ದೆಗಳಲ್ಲಿ ವಿದ್ಯುತ್‌ ಕಂಬಗಳು ವಾಲಿ, ತಂತಿಗಳು ಜೋತು ...

Vijaya Karnataka 12 Jun 2019, 5:00 am
ಮುರಗೋಡ: ಮುರಗೋಡ ಹೋಬಳಿ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್‌ ಸರಬರಾಜು ಮಾಡಬೇಕು ಹಾಗೂ ಹೊಲ, ಗದ್ದೆಗಳಲ್ಲಿ ವಿದ್ಯುತ್‌ ಕಂಬಗಳು ವಾಲಿ, ತಂತಿಗಳು ಜೋತು ಬಿದ್ದಿದ್ದು ಅವುಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಸ್ಥಳೀಯ ಹೆಸ್ಕಾಂ ಶಾಖಾಧಿಕಾರಿ ಎಂ.ಎಸ್‌. ಯರಗಟ್ಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Vijaya Karnataka Web BEL-11MURGODPHOTO2


ಕರವೇ ಸವದತ್ತಿ ತಾಲೂಕು ಅಧ್ಯಕ್ಷ ಉದಯ ಚಿಕ್ಕಣ್ಣವರ ಮಾತನಾಡಿ, ಸಮರ್ಪಕ ವಿದ್ಯುತ್‌ ಪೂರೈಕೆ ಇಲ್ಲದೇ, ಕೈಗಾರಿಕೆ, ವಾಣಿಜ್ಯ ವಹಿವಾಟು, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಕುಡಿಯುವ ನೀರು ಸಿಗುವುದೂ ದುರ್ಲಭವಾಗಿದೆ. ಈಗಾಗಲೇ ಅನೇಕ ಬಾರಿ ಈ ಕುರಿತು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಸಮರ್ಪಕವಾಗಿ ವಿದ್ಯುತ್‌ ಪೂರೈಸಬೇಕೆಂದು ಆಗ್ರಹಿಸಿದರು.

ಮುರಗೋಡ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸೊಗಲದ, ಕರವೇ ತಾಲೂಕು ಗೌರವಾಧ್ಯಕ್ಷ ಅರ್ಜುನ ಧರ್ಮಶಾಲಿ, ಬಸವರಾಜ ಆಡಿನ, ದೀಪಕ ಬಾಳಿಕಾಯಿ, ಬಾಗೇವಾಡಿ ಮಾತನಾಡಿದರು. ಸಂತೋಷ ಹಟ್ಟಿಹೊಳಿ, ರವಿ ಹಟ್ಟಿಹೊಳಿ, ತನ್ವೀರ ಮುಲ್ಲಾ, ಮುಸ್ತಾಕ ಬೇಪಾರಿ, ತಾಬೇಕ ಬೇಪಾರಿ, ಸುಬಾನಿ ಬೇಪಾರಿ, ಇಮ್ರಾನ ಮುಲ್ಲಾ, ಆಶೀಫ್‌ ಬೇಪಾರಿ, ಹಲವಾರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ