ಆ್ಯಪ್ನಗರ

ಯರಗಟ್ಟಿ ತಾಲೂಕು ಘೋಷಣೆಗೆ ಆಗ್ರಹ

ಯರಗಟ್ಟಿ: ಯರಗಟ್ಟಿ ಅತಿ ವೇಗವಾಗಿ ...

Vijaya Karnataka 12 Dec 2018, 5:00 am
ಯರಗಟ್ಟಿ :ಯರಗಟ್ಟಿ ಅತಿ ವೇಗವಾಗಿ ಬೆಳೆಯುತ್ತಿದ್ದು, ಸುಗಮ ಆಡಳಿತಾತ್ಮಕ ದೃಷ್ಟಿಯಿಂದ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ರಾಜ್ಯ ರೈತ ಸೇನೆ ಅಧ್ಯಕ್ಷ ವೀರೇಶ ಸೊಬರದಮಠ ರಾಜ್ಯ ಸರಕಾರವನ್ನು ಆಗ್ರಹಿಸಿದರು.
Vijaya Karnataka Web BEL-11YGTPHOTO1


ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಯರಗಟ್ಟಿ ತಾಲೂಕು ಕೇಂದ್ರ ಘೋಷಣೆಗಾಗಿ ನಡೆದ ಐದನೇ ದಿನದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಮಹದಾಯಿ ನ್ಯಾಯಾಧಿಕರಣದಲ್ಲಿ ರಾಜ್ಯದ ಪರವಾಗಿ ತೀರ್ಪು ಬಂದು ಹಲವು ತಿಂಗಳಾದರೂ ರಾಜ್ಯ ಸರಕಾರ ಇನ್ನೂ ಕಾಮಗಾರಿ ಆರಂಭಿಸಿಲ್ಲ. ಶೀಘ್ರ ಮಹದಾಯಿ ಯೋಜನೆ ಅನುಷ್ಠಾನಗೊಳಿಸದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಿದರೂ ಸ್ಥಳಕ್ಕೆ ಯಾವ ಅಧಿಕಾರಿಗಳು ಬಾರದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ರಸ್ತೆತಡೆಗೆ ಮುಂದಾದರು. ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಪ್ರಸಾದ ಪಣೇಕರ ಉಪವಾಸ ಸತ್ಯಾಗ್ರಹ ಹಿಂಪಡೆಯುವಂತೆ ಪ್ರತಿಭಟನಾಕಾರರ ಮನವೊಲಿಸಿ ಎಳನೀರು ಕುಡಿಸಿದರು. ತಾಲೂಕು ಹೋರಾಟ ಸಮಿತಿಯ ನಿಯೋಗವನ್ನು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿಸುವುದಾಗಿ ಭರವಸೆ ನಿಡಿದರು.

ರೈತ ಸೇನೆ ಜಿಲ್ಲಾಧ್ಯಕ್ಷ ಸೋಮು ರೈನಾಪುರ, ತಾಲೂಕು ಅಧ್ಯಕ್ಷ ಪಂಚಪ್ಪ ಹಣಶಿ, ರಫೀಕ್‌ ಡಿ.ಕೆ, ಗಿರೆಪ್ಪ ಹಂಜಿ, ಶಿವನಗೌಡ ಗೌಡರ, ಸಣ್ಣಫಕೀರಪ್ಪ ಜೋಗನ್ನವರ, ಮಲ್ಲಿಕಾರ್ಜುನಯ್ಯ ಹಿರೇಮಠ, ಪ್ರವೀಣ ಪಠಾತರ, ಮಂಜುನಾಥ ಬಸಳಿಗುಂದಿ, ದೇವೇಂದ್ರಪ್ಪ ದ್ಯಾಪಲಿಸಿ, ದಸ್ತಗೀರ ಪೈಲ್ವಾನ, ಮಾಯಪ್ಪ ವಡೆಕ್ಕನವರ, ಶಮೀರ ಜಮಾದಾರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ