ಆ್ಯಪ್ನಗರ

ಗ್ರುಪ್‌ ಡಿ ಹುದ್ದೆ ನೇಮಕಾತಿ ರದ್ದುಗೊಳಿಸಲು ಆಗ್ರಹ

...

Vijaya Karnataka 28 Aug 2019, 5:00 am
ಬೆಳಗಾವಿ: ನೈರುತ್ಯ ರೈಲ್ವೆ ವಲಯದ ಗ್ರುಪ್‌ ಡಿ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ರದ್ದುಪಡಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
Vijaya Karnataka Web BEL-27 LBS 4


ಈಗಾಗಲೇ ಹುಬ್ಬಳ್ಳಿ ವಲಯದಲ್ಲಿ 2,200 ಗ್ರುಪ್‌ ಡಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ. ಈ ಆಯ್ಕೆ ಪಟ್ಟಿಯಲ್ಲಿ 22 ಜನ ಕನ್ನಡಿಗರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನುಳಿದ ಹುದ್ದೆಗಳು ಬಿಹಾರ, ರಾಜಸ್ಥಾನ, ಮಧ್ಯಪ್ರದೇಶದ ಅಭ್ಯರ್ಥಿಗಳ ಪಾಲಾಗಿದೆ. ಸ್ಥಳೀಯರಿಗೆ ಆದ್ಯತೆ ಸಿಗದ ಆಯ್ಕೆ ಪಟ್ಟಿ ರದ್ದುಪಡಿಸಬೇಕು. ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ನೈರುತ್ಯ ವಲಯದಲ್ಲಿ 2012ರಲ್ಲಿಯೂ 4,773 ಗ್ರುಪ್‌ ಡಿ ಹುದ್ದೆಗಳಿಗೆ ನಡೆದ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿರಲಿಲ್ಲ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ಎಚ್ಚೆತ್ತುಕೊಂಡ ನೇಮಕಾತಿ ವಿಭಾಗ ಬಳಿಕ ಸ್ಥಳೀಯ ಮಟ್ಟದಲ್ಲಿ ಪರೀಕ್ಷೆ ನಡೆಸಿ, ಕನ್ನಡಿಗರಿಗೆ ಆದ್ಯತೆ ನೀಡಿತ್ತು. ಈ ವೇಳೆ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರು. ಈಗ ಮತ್ತೆ ಆರ್‌ಆರ್‌ಸಿ ನೇಮಕಾತಿ ವಿಭಾಗ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ತಕ್ಷಣ ಆಯ್ಕೆ ಪಟ್ಟಿ ರದ್ದುಪಡಿಸಿ, ಸ್ಥಳೀಯರಿಗೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿ ಮೂಲಕ ಎಚ್ಚರಿಸಿದ್ದಾರೆ.

ಸೇನೆಯ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ, ನಗರ ಘಟಕ ಅಧ್ಯಕ್ಷ ಆನಂದ ಶಿರೂರ, ಮಂಜುನಾಥ ದಡಪರ, ಸುಷ್ಮಾ ಯಾದವಾಡ, ಲತಾ ಹಿರೇಮಠ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ