ಆ್ಯಪ್ನಗರ

ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ಚಿಕ್ಕೋಡಿ: ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಸರಕಾರದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಎರಡು ಸಂಪುಟ ದರ್ಜೆ ಸಚಿವ ಸ್ಥಾನ ...

Vijaya Karnataka 23 May 2018, 5:00 am
ಚಿಕ್ಕೋಡಿ: ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಸರಕಾರದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮಾಜಕ್ಕೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಎರಡು ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಶಾಸಕ, ಕರ್ನಾಟಕ ರಾಜ್ಯ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಶಹಾಜಾನ್‌ ಡೊಂಗರಗಾಂವ ಆಗ್ರಹಿಸಿದ್ದಾರೆ.
Vijaya Karnataka Web BEL-22CKD5


ಪಟ್ಟಣದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದಿರುವ 78 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆಲ್ಲಲು ಮುಸ್ಲಿಂ ಮತಗಳೇ ನಿರ್ಣಾಯಕವಾಗಿವೆ. ಅಥಣಿ, ಕಾಗವಾಡ, ಚಿಕ್ಕೋಡಿ, ಬೈಲಹೊಂಗಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಗೆಲುವಿಗೆ ಮುಸ್ಲಿಂ ಮತಗಳೇ ಕಾರಣವಾಗಿವೆ. ಮುಸ್ಲಿಂ ಸಮುದಾಯಕ್ಕೆ ಈವರೆಗೆ ಒಮ್ಮೆಯೂ ಮುಖ್ಯಮಂತ್ರಿ ಸ್ಥಾನ ಲಭಿಸಿಲ್ಲ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿಯೂ ಅನೇಕ ಮುಸ್ಲಿಂ ಮುಖಂಡರು ಮುಂಚೂಣಿಯಲ್ಲಿದ್ದರು. ಸಮಾಜ ದೇಶಕ್ಕೆ 3 ರಾಷ್ಟ್ರಪತಿಗಳನ್ನು ನೀಡಿದೆ. ಯಾವಾಗಲೂ ಕಾಂಗ್ರೆಸ್‌ ಪಕ್ಷ ದ ಬೆನ್ನೆಲುಬಾಗಿ ನಿಂತಿರುವ ಮುಸ್ಲಿಂ ಸಮಾಜ ಕಾಂಗ್ರೆಸ್‌ ಪಕ್ಷ ದಲ್ಲಿ ಸಿಂಹಪಾಲು ಹೊಂದಿದೆ. ಶರದ್‌ ಪವಾರ ಸರಕಾರದ ಮಾದರಿಯಲ್ಲಿ ರಾಜ್ಯದಲ್ಲಿಯೂ ಉಪಮುಖ್ಯಮಂತ್ರಿ ಸೇರಿದಂತೆ 3 ಸ್ಥಾನಮಾನ ನೀಡುವಂತೆ ಒತ್ತಾಯಿಸಿದರು.

ಹೈದರ್‌ ಅಲಿ ಪಟೇಲ್‌, ಸಲೀಮ್‌ ಖತೀಬ್‌, ಮುಕ್ತಿಯಾರ್‌ ಅಹ್ಮದ್‌ ನಾಯಿಕವಾಡಿ, ಎಂ.ಡಿ. ನಾಯಿಕವಾಡಿ, ಅಬ್ದಲ್‌ಮಜೀದ್‌ ಬೇಪಾರಿ, ಚಾಂದ್‌ಸಾಬ್‌ ಸನದಿ, ತೌಫಿಕ್‌ ಮೋಮಿನ್‌, ದಾವಲಸಾಬ್‌ ಪೈಲವಾನ್‌, ಫಿರೋಜ್‌ ಖಾದ್ರಿ, ಮುಕ್ತುಮ್‌ ಬೇಗ್‌ ಜಮಾದಾರ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ