ಆ್ಯಪ್ನಗರ

ಬೆದರಿಕೆ ಪತ್ರ ಪ್ರಕರಣದ ತನಿಖೆಗೆ ಆಗ್ರಹ

ಬೆಳಗಾವಿ: ಮುಂಡರಗಿ ತೋಂಟದಾರ್ಯ ಶಾಖಾಮಠದ ...

Vijaya Karnataka 4 Feb 2020, 5:00 am
ಬೆಳಗಾವಿ: ಮುಂಡರಗಿ ತೋಂಟದಾರ್ಯ ಶಾಖಾಮಠದ ಶ್ರೀ ನಿಜಗುಣಪ್ರಭು ಸ್ವಾಮೀಜಿಗಳಿಗೆ ಬೆದರಿಕೆ ಪತ್ರ ಬಂದಿರುವ ಕುರಿತು ತನಿಖೆಗೆ ಒತ್ತಾಯಿಸಿ ಜಿಲ್ಲಾ ಬಸವಾಭಿಮಾನಿಗಳ ಒಕ್ಕೂಟದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 3LBS1_53
ಮುಂಡರಗಿ ತೋಂಟದಾರ್ಯ ಶಾಖಾಮಠದ ಶ್ರೀ ನಿಜಗುಣಪ್ರಭು ಸ್ವಾಮೀಜಿ ಅವರಿಗೆ ಬೆದರಿಕೆ ಪತ್ರ ಬರೆದವರನ್ನು ಪತ್ತೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಬಸವಾಭಿಮಾನಿಗಳ ಒಕ್ಕೂಟದ ಸದಸ್ಯರು ಪ್ರತಿಭಟಿಸಿದರು.


ತೋಂಟದಾರ್ಯ ನಿಜಗುಣಪ್ರಭು ಸ್ವಾಮೀಜಿ ಅವರು ದೇಶ ವಿದೇಶಗಳಲ್ಲಿಬಸವಾದಿ ಶರಣರ ವಚನ ಚಳವಳಿಯ ವೈಚಾರಿಕ ಕ್ರಾಂತಿ ಮಾಡುತ್ತಿದ್ದಾರೆ. ಸಮಾಜದಲ್ಲಿನ ಮೌಢ್ಯತೆ, ಕಂದಾಚಾರಗಳ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಶರಣರ ವಚನಗಳ ಮೂಲಕ ಜನರಲ್ಲಿಜಾಗೃತಿ ಮೂಡಿಸುತ್ತಿದ್ದಾರೆ. ಇಂಥ ಕಾರ‍್ಯ ಮಾಡುತ್ತಿರುವ ಶ್ರೀಗಳಿಗೆ ದಾವಣಗೆರೆಯಿಂದ ಮೂರು ಸಲ ಬೆದರಿಕೆ ಪತ್ರಗಳು ಬಂದಿವೆ. ಆದ್ದರಿಂದ ಕೂಡಲೇ ನಿಜಗುಣಪ್ರಭು ಸ್ವಾಮೀಜಿ ಅವರಿಗೆ ಭದ್ರತೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಬೆದರಿಕೆ ಪತ್ರದ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಬೆದರಿಕೆ ಹಾಕಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಆನಂದ ಗುಡಸ, ಕೆ. ಶರ್ಮಾ, ಬಸವರಾಜ ರೊಟ್ಟಿ, ಅಶೋಕ ಬೆಂಡಗೇರಿ, ಶಂಕರ ಗುಡಸ, ಕೆ.ಬಸವರಾಜು, ವಿ.ಕೆ. ಪಾಟೀಲ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ