ಆ್ಯಪ್ನಗರ

ವಾರದೊಳಗೆ ಕಬ್ಬಿನ ಬಾಕಿ ಬಿಲ್‌ ಪಾವತಿಸಲು ಆಗ್ರಹ

ಖಾನಾಪುರ: 2018-19ರ ಹಂಗಾಮಿನಲ್ಲಿ ಲೈಲಾ ಶುಗರ್ಸ್‌ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ ಕಬ್ಬಿಗೆ ...

Vijaya Karnataka 7 May 2019, 5:00 am
ಖಾನಾಪುರ : 2018-19ರ ಹಂಗಾಮಿನಲ್ಲಿ ಲೈಲಾ ಶುಗರ್ಸ್‌ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್‌ ಕಬ್ಬಿಗೆ ರೂ. 2200 ದರದಂತೆ ಕಬ್ಬಿನ ಬಾಕಿ ಬಿಲ್ಲನ್ನು ಮುಂದಿನ ಒಂದು ವಾರದೊಳಗೆ ಪಾವತಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಹಾಂತೇಶ ರಾಹೂತ ಆಗ್ರಹಿಸಿದರು.
Vijaya Karnataka Web BEL-6KHANAPUR1


ಪಟ್ಟಣದ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಸೋಮವಾರ ತಾಲೂಕಿನ ರೈತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘದ ವತಿಯಿಂದ ಕೈಗೊಂಡ ಸಾಂಕೇತಿಕ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ತಮ್ಮ ಜಮೀನುಗಳ ಪಹಣಿ ಪತ್ರಿಕೆ ಪಡೆಯಲು ತಹಸೀಲ್ದಾರ್‌ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್‌ ಪ್ರಾರಂಭಿಸುವುದು ಮತ್ತು ಗ್ರಾಮ ಲೆಕ್ಕಿಗರು ನಗರಪ್ರದೇಶದಲ್ಲಿ ಇರದೇ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆದೇಶಿಸುವುದು ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ತಾಲೂಕು ಆಡಳಿತದ ಗಮನ ಸೆಳೆದರು.

ಬಳಿಕ ಸಂಘದ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುರೇಶ ಹೂಲಿಕಟ್ಟಿ, ಅಶೋಕ ಇಟಗಿ, ಈರಪ್ಪ ಕೋಳಿ, ಲಕ್ಷ ್ಮಣ ತಳವಾರ, ರುದ್ರಪ್ಪ ಇಟಗಿ, ಶಿವಾನಂದ ಅಗಸೀಮನಿ ತಾಲೂಕಿನ ವಿವಿಧ ಗ್ರಾಮಗಳ ರೈತರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ