ಆ್ಯಪ್ನಗರ

ರಸ್ತೆ ಅಗಲೀಕರಣಕ್ಕೆ ಆಗ್ರಹ

ಪಟ್ಟಣದಲ್ಲಿಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸುವ ಕಾಮಗಾರಿ ಆರಂಭಿಸಲಾಗಿದ್ದು ಇದು ಅವೈಜ್ಞಾನಿಕವಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ, ಜಿಪಂ ಸದಸ್ಯ ಶಂಕರ ಮಾಡಲಗಿ ...

Vijaya Karnataka 11 Nov 2019, 5:00 am
ಬೈಲಹೊಂಗಲ: ಪಟ್ಟಣದಲ್ಲಿಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸುವ ಕಾಮಗಾರಿ ಆರಂಭಿಸಲಾಗಿದ್ದು ಇದು ಅವೈಜ್ಞಾನಿಕವಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ, ಜಿಪಂ ಸದಸ್ಯ ಶಂಕರ ಮಾಡಲಗಿ ಆರೋಪಿಸಿದ್ದಾರೆ.
Vijaya Karnataka Web 10HTP6      SHANKAR MADALAGI_53
ಶಂಕರ ಮಾಡಲಗಿ


ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ಪಟ್ಟಣದ ರಾಯಣ್ಣ ವೃತ್ತದಿಂದ ಜವಳಿಕೂಟದವರೆಗಿನ ರಸ್ತೆಯನ್ನು ಸಿಸಿ ರಸ್ತೆ ಮಾಡಿ, ಮುಂದಿನ ಅಂಬೇಡ್ಕರ ಉದ್ಯಾನವನದ ವರೆಗಿನ ರಸ್ತೆಯನ್ನು ಕೇವಲ ಡಾಂಬರೀಕರಣ ಮಾಡಲಾಗುತ್ತಿದೆ. ಈ ರಸ್ತೆಯು ಇಕ್ಕಟ್ಟಾಗಿದ್ದು ವಾಹನ ಸಂಚಾರ, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಈ ರಸ್ತೆಯನ್ನು ಈಗಿದ್ದ ರೀತಿಯಲ್ಲಿಯೇ ದುರಸ್ತಿಗೊಳಿಸಿದರೆ ಟ್ರಾಫಿಕ್‌ ಸಮಸ್ಯೆ ಎದುರಾಗಿ ಮತ್ತೆ ತೊಂದರೆಯಾಗಲಿದೆ. ರಾಯಣ್ಣ ವೃತ್ತದಿಂದ ಅಂಬೇಡ್ಕರ ಉದ್ಯಾನವನದವರೆಗೆ ಮಾಸ್ಟರ್‌ ಪ್ಲಾನ್‌ ಮಾಡಿಸಿ ರಸ್ತೆ ಅಗಲೀಕರಣ ಮಾಡಬೇಕಿದ್ದು, ಶಾಸಕರು ಈ ಕುರಿತು ಗಮನ ಹರಿಸಬೇಕಾಗಿದೆ.

ಹದಗೆಟ್ಟಿರುವ ರಸ್ತೆಗಳನ್ನು ಸುಧಾರಿಸುವ ಬದಲು ಅವುಗಳನ್ನು ಹೊಸದಾಗಿ ನಿರ್ಮಿಸಬೇಕು. ಟ್ರಾಫಿಕ್‌ ಹೆಚ್ಚಾಗುತ್ತಿರುವ ಪ್ರದೇಶಗಳನ್ನು ಅಗಲೀಕರಣ ಮಾಡಿ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಅಲ್ಲದೆ ಬೆಳಗಾವಿ ರಸ್ತೆಯಿಂದ ರಾಯಣ್ಣ ವೃತ್ತದವರೆಗಿನ ರಸ್ತೆಯೂ ಕೆಟ್ಟು ರಸ್ತೆಯ ತುಂಬ ಗುಂಡಿಗಳು ಬಿದ್ದಿವೆ. ಈ ರಸ್ತೆಯನ್ನು ಕೂಡ ದುರಸ್ತಿಗೊಳಿಸಬೇಕು'', ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ