ಆ್ಯಪ್ನಗರ

ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹ

ಬೈಲಹೊಂಗಲ: ಪಟ್ಟಣದ ಬಸವೇಶ್ವರ ಆಶ್ರಯ ಕಾಲೊನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ...

Vijaya Karnataka 12 Jun 2019, 5:00 am
ಬೈಲಹೊಂಗಲ: ಪಟ್ಟಣದ ಬಸವೇಶ್ವರ ಆಶ್ರಯ ಕಾಲೊನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.8ರ ಮುಖ್ಯಶಿಕ್ಷ ಕ ಶಾಲೆಯ ಕೆಲಸಗಳ ಬಗ್ಗೆ ನಿರ್ಲಕ್ಷ್ಯ ತೋರಿ, ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಅವರನ್ನು ತಕ್ಷ ಣವೇ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷ ಣಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-11HTP2


ಮುಖ್ಯಶಿಕ್ಷ ಕ ಬಿ.ಬಿ. ಬಸಕ್ರಿ ಅವರು ತಮ್ಮ ಕರ್ತವ್ಯ ಮರೆತು ರಾಜಕೀಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಮ್ಮ ಜವಾಬ್ದಾರಿಯನ್ನು ನಿರ್ವಹಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅವರನ್ನು ತಕ್ಷ ಣ ವರ್ಗಾವಣೆ ಮಾಡಬೇಕು. ಬಡ, ಹಿಂದುಳಿದ ಭಾಗದ ಶಾಲೆಯ ಬೆಳವಣಿಗೆ ಕುರಿತು ಆಸಕ್ತಿ ಇರುವ, ಶಿಕ್ಷ ಣ ಗುಣಮಟ್ಟದ ಬಗ್ಗೆ ಕಾಳಜಿ ವಹಿಸುವ ಬೇರೆ ಮುಖ್ಯ ಶಿಕ್ಷ ಕರನ್ನು ನೇಮಕ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ನಿರ್ಲಕ್ಷ ್ಯ ವಹಿಸಿದರೆ, ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

ಎಸ್‌ಡಿಎಂಸಿ ಅಧ್ಯಕ್ಷ ಪುಂಡಲೀಕ ತಿಮ್ಮಾಪೂರ, ದುರ್ಗಾ ಯರಜರ್ವಿ, ದಶರಥ ಮ್ಯಾಗೇರಿ, ರಾಜು ತಳವಾರ, ಕಿರಣ ಬೆಳಗಾವಿಮಠ, ನಂದು ಹೊಂಗಲ, ನಿಖಿಲ ಅಡಕಿ ಹಾಗೂ ಪಾಲಕರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ