ಆ್ಯಪ್ನಗರ

ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರನ್ನು ನೇಮಿಸಿ

ಚಿಕ್ಕೋಡಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ...

Vijaya Karnataka 13 Jan 2019, 5:00 am
ಚಿಕ್ಕೋಡಿ : ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಅವಶ್ಯಕತೆ ಇದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಪರಿಣತಿ ಹೊಂದಿರುವ ಸ್ತ್ರೀರೋಗ ತಜ್ಞ ವೈದ್ಯರನ್ನು ನೇಮಕ ಮಾಡುವ ನಿಟ್ಟಿನಲ್ಲಿ ಮೇಲಧಿಕಾರಿಗಳಿಗೆ ಪತ್ರ ಬರೆಯಬೇಕೆಂದು ತಾಲೂಕು ಪಂಚಾಯಿತಿ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು.
Vijaya Karnataka Web BEL-12CKD1


ಇಲ್ಲಿನ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ತಾಪಂ ಅಧ್ಯಕ್ಷೆ ಉರ್ಮಿಳಾ ಪಾಟೀಲ ಅಧ್ಯಕ್ಷ ತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ರವೀಂದ್ರ ಮಿರ್ಜೆ ಹಾಗೂ ಇತರ ಸದಸ್ಯರು, ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಬಡ ಜನರಿಗೆ ಸಂಜೀವಿನಿಯಾಗಿದೆ. ಆಸ್ಪತ್ರೆಯಲ್ಲಿ ಎಲ್ಲ ಮೂಲಭೂತ ಸೌಲಭ್ಯ ಇದ್ದು, ಅವುಗಳ ಉಪಯೋಗ ಮಾಡಲು ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತಜ್ಞ ವೈದ್ಯರ ನೇಮಕ ಮಾಡಬೇಕೆಂದು ಸರಕಾರಕ್ಕೆ ಪತ್ರ ಬರೆಯಬೇಕು ಎಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ ಮಾತನಾಡಿ, ಇತ್ತೀಚೆಗೆ ಕಲ್ಲೋಳ ಗ್ರಾಮದ ಹಸುಗೂಸು ನಿಧನದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ 1.20 ಲಕ್ಷ ರೂ. ಪರಿಹಾರ ಧನ ಮಂಜೂರಾಗಿದೆ. ಸರಕಾರದ ನಾನಾ ಯೋಜನೆಗಳಡಿ ಚಿಕಿತ್ಸೆ ಪಡೆಯುವ ಫಲಾನುಭವಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗದೇ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ವೈದ್ಯರ ಸಲಹೆ ಪಡೆದು ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಇದರಿಂದ ಸರಕಾರದ ಸಹಾಯ ಧನ ಲಭಿಸುತ್ತದೆ ಎಂದರು.

ಹವಮಾನ ಏರುಪೇರಾಗಿದ್ದರಿಂದ ತಾಲೂಕಿನಲ್ಲಿ ಸಾಂಕ್ರಾಮಿಕ ರೋಗದ ಲಕ್ಷ ಣಗಳು ಕಾಣುತ್ತಿದ್ದು, ಸಾಂಕ್ರಾಮಿಕ ರೋಗ ಹರಡದಂತೆ ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ಜನಪ್ರತಿನಿಧಿಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಕ್ಷೇತ್ರ ಶಿಕ್ಷ ಣಾಧಿಕಾರಿ ಶ್ರೀಪತಿ ಭಟ್‌ ಮಾತನಾಡಿ, ಚಿಕ್ಕೋಡಿ ವಲಯದಲ್ಲಿ 12 ಶಾಲಾ ಕೊಠಡಿ ನಿರ್ಮಾಣ ಮಾಡಲು 2.12 ಕೋಟಿ ರೂ ಅನುದಾನ ಮಂಜೂರಾಗಿದೆ. ಶಾಲಾ ಕೊಠಡಿ ಇಲ್ಲದ ಶಾಲೆಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮಾಡಲಾಗುತ್ತದೆ. ಪ್ರಸಕ್ತ ವರ್ಷದ ಹತ್ತನೇ ತರಗತಿ ಫಲಿತಾಂಶ ಉತ್ತಮವಾಗಿ ಬರಬೇಕೆನ್ನುವ ನಿಟ್ಟಿನಲ್ಲಿ ವಿಶೇಷ ತರಗತಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಅಧಿಕಾರಿ ಎಸ್‌.ಎಲ್‌.ಸವದಿ ಇಲಾಖೆ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಮಹಾದೇವಿ ನಾಯಿಕ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಸದಸ್ಯರಾದ ಕಾಶಿನಾಥ ಕುರಣಿ, ರಾಜು ಪಾಟೀಲ, ವೀರೇಂದ್ರ ಪಾಟೀಲ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಪಾಟೀಲ ಸ್ವಾಗತಿಸಿದರು.

ಚರ್ಚಿತ ವಿಷಯಗಳ ಶೀಘ್ರ ಇತ್ಯರ್ಥಕ್ಕೆ ಸೂಚನೆ :
ಅಧ್ಯಕ್ಷ ತೆ ವಹಿಸಿದ್ದ ತಾಪಂ ಅಧ್ಯಕ್ಷೆ ಉರ್ಮಿಳಾ ಪಾಟೀಲ ಮಾತನಾಡಿ, ತಾಲೂಕು ಪಂಚಾಯಿತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ತಾಪಂ ಸಭೆಯಲ್ಲಿ ಚರ್ಚೆ ಮಾಡಿರುವ ವಿಷಯಗಳನ್ನು ಶೀಘ್ರ ಇತ್ಯರ್ಥಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಬೇಸಿಗೆ ದಿನಗಳಲ್ಲಿ ಯಾವುದೇ ಗ್ರಾಮದಲ್ಲಿ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ