ಆ್ಯಪ್ನಗರ

ದತ್ತಪೀಠ ಹಿಂದೂಗಳಿಗೆ ಒಪ್ಪಿಸಲು ಆಗ್ರಹ

ಬೆಳಗಾವಿ: ಚಿಕ್ಕಮಗಳೂರಿನ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವಂತೆ ಆಗ್ರಹಿಸಿ ...

Vijaya Karnataka 11 Oct 2019, 5:00 am
ಬೆಳಗಾವಿ: ಚಿಕ್ಕಮಗಳೂರಿನ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ರವಾನಿಸಿದರು.
Vijaya Karnataka Web 10 LBS 2_53


ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೀ ಗುರು ದತ್ತಾತ್ರೇಯ ದೇವರ ನೆಲೆ. ಆದರೆ, ಕೆಲವರು ಈ ಪ್ರದೇಶವನ್ನು ಆಕ್ರಮಿಸಿಕೊಂಡು ಬಾಬಾ ಬುಡನ್‌ಗಿರಿ ಎಂದು ಹೇಳುತ್ತಿದ್ದಾರೆ. ಬಾಬಾಬುಡನ್‌ ದರ್ಗಾ ನಾಗೇಹಳ್ಳಿಯಲ್ಲಿದೆ. ಇದಕ್ಕೆ ಸರಕಾರದ ದಾಖಲೆಗಳೇ ಸಾಕ್ಷಿ. ಚಂದ್ರದ್ರೋಣ ಪರ್ವತದಲ್ಲಿದತ್ತಾತ್ರೇಯ ಪೀಠ ಇರುವುದು ಸರಕಾರದ ದಾಖಲೆಯಲ್ಲಿದೆ. ಆದರೂ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುತ್ತಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೇನೆ ಜಿಲ್ಲಾಧ್ಯಕ್ಷ ವಿನಯ ಅಂಗ್ರೊಳ್ಳಿ, ಸುಧಾಕರ ಕಾಂಬಳೆ, ರಮೇಶ ಜಿ., ಸತೀಶ ಪಾಟೀಲ, ಮಂಜುನಾಥ ಕೋಲಕಾರ್‌, ಯಶವಂತ ಎ. ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ