ಆ್ಯಪ್ನಗರ

ಜಿಲ್ಲಾಧಿಕಾರಿ ಆವರಣದಲ್ಲಿ ಗ್ರಾಹಕರ ಆಯೋಗದ ಕಚೇರಿ ಆರಂಭಕ್ಕೆ ಒತ್ತಾಯ

ಬೆಳಗಾವಿ: ರಾಜ್ಯ ಸರಕಾರ ಮಂಜೂರು ಮಾಡಿರುವ ...

Vijaya Karnataka 1 Sep 2020, 5:00 am
ಬೆಳಗಾವಿ: ರಾಜ್ಯ ಸರಕಾರ ಮಂಜೂರು ಮಾಡಿರುವ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ಕಚೇರಿಯನ್ನು ನಗರದ ಜಿಲ್ಲಾಧಿಕಾರಿ ಆವರಣದಲ್ಲಿಆರಂಭಿಸಬೇಕು ಎಂದು ಆಗ್ರಹಿಸಿ ಸೋಮವಾರ ಬೆಳಗಾವಿ ಬಾರ್‌ ಅಸೋಸಿಯೇಷನ್‌ ನೇತೃತ್ವದಲ್ಲಿವಕೀಲರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 31LBS4_53
ಬೆಳಗಾವಿ ಜಿಲ್ಲಾಧಿಕಾರಿ ಆವರಣದಲ್ಲಿ ರಾಜ್ಯ ಗ್ರಾಹಕರ ಆಯೋಗದ ಕಚೇರಿ ಆರಂಭಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಬಾರ್‌ ಅಸೋಸಿಯೇಷನ್‌ ನೇತೃತ್ವದಲ್ಲಿವಕೀಲರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ನಗರದಲ್ಲಿನಾಲ್ಕು ದಶಕಗಳ ಹೋರಾಟದ ಫಲವಾಗಿ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಮಂಜೂರಾಗಿದೆ. ಆದರೆ, ಇದುವರೆಗೂ ಕಚೇರಿ ಆರಂಭವಾಗಿಲ್ಲ. ಜತೆಗೆ ಕಚೇರಿಗೆ ಸ್ಥಳ ನಿಗದಿ ಕೂಡ ಮಾಡಿಲ್ಲ. ಸರಕಾರ ಮಂಜೂರು ಮಾಡಿರುವ ಕಚೇರಿ ಸ್ಥಳಾವಕಾಶವಿಲ್ಲದೆ ಆರಂಭವಾಗಿಲ್ಲ. ಕೂಡಲೇ ಕಚೇರಿ ಆರಂಭಕ್ಕೆ ಬೇಕಾದ ಎಲ್ಲಅಗತ್ಯ ಸಿದ್ಧತೆಯನ್ನು ಜಿಲ್ಲಾಡಳಿತ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಬಾರ್‌ ಅಸೋಶಿಯೇಷನ್‌ ಉಪಾಧ್ಯಕ್ಷ ಚಂದ್ರಕಾಂತ ಮಜಗಿ, ಪ್ರಧಾನ ಕಾರ್ಯದರ್ಶಿ ಆರ್‌.ಸಿ. ಪಾಟೀಲ, ಶಿವಪುತ್ರ ಎನ್‌.ಎಫ್‌., ಪ್ರಭಾಕರ ಪವಾರ, ಬಸವರಾಜ ಬಿ.ಒ., ನಿತಿನ್‌ ಬಿ.ಜಿ. ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ