ಆ್ಯಪ್ನಗರ

ಗದ್ದಿಕರವಿನಕೊಪ್ಪಕ್ಕೆ ಬಸ್‌ ಸೌಲಭ್ಯ ಕಲ್ಪಿಸಿ

ವಿಕ ಸುದ್ದಿಲೋಕ ಎಂಕೆ...

Vijaya Karnataka 31 May 2018, 5:00 am
ಎಂ.ಕೆ. ಹುಬ್ಬಳ್ಳಿ: ಗದ್ದಿಕರವಿನಕೊಪ್ಪ ಗ್ರಾಮಕ್ಕೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಗ್ರಾಮದ ಶಾಂತೇಶ ಹುಬ್ಬಳ್ಳಿ ಅವರು ಶಾಸಕ ಮಹಾಂಗೇಶ ದೊಡಗೌಡ್ರ ಅವರನ್ನು ವಿನಂತಿಸಿದರು.
Vijaya Karnataka Web BEL-30MKH2


ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಾಮಾನ್ಯ ಸಭೆಗೆ ಶಾಸಕರು ಆಗಮಿಸುತ್ತಿದ್ದಾಗ ಕಚೇರಿ ಆವರಣದಲ್ಲಿ ಮನವಿ ಪತ್ರ ಸಲ್ಲಿಸಿದರು.

ಮನವಿಯಲ್ಲಿ ಎಂ.ಕೆ. ಹುಬ್ಬಳ್ಳಿಯಿಂದ ಬೆಳಗಾವಿ, ಧಾರವಾಡ ಕಡೆ ಸಾಗಲು ಬೆಳಗ್ಗೆ ಬಸ್‌ ಸೌಲಭ್ಯ ಇಲ್ಲವಾಗಿದೆ. ಇರುವ ಬಸ್‌ಗಳನ್ನು ಬಂದ್‌ ಮಾಡಲಾಗಿದ್ದು ಪಟ್ಟಣಗಳಿಗೆ ಉದ್ಯೋಗ ಅರಸಿ ಹೋಗುವ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ, ತೀವ್ರ ತೊಂದರೆಯಾಗಿದೆ. ಹೀಗಾಗಿ ತಕ್ಷ ಣ ಬಸ್‌ಗಳನ್ನು ಆರಂಭಿಸಲು ಕ್ರಮಕೈಗೊಳ್ಳಬೇಕೆಂದು ಶಾಸಕರಲ್ಲಿ ವಿನಂತಿಸಿದರು. ಮನವಿ ಸ್ವೀಕರಿಸಿದ ಶಾಸಕರು ನಾಳೆ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ