ಆ್ಯಪ್ನಗರ

ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ವಾಪಸ್‌ಗೆ ಆಗ್ರಹ

ಬೆಳಗಾವಿ: ಗೋಕಾಕ ತಾಲೂಕಿನ ಫಾಲ್ಸ್‌ ಬಳಿಯ ದನದ ಓಣಿ ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ...

Vijaya Karnataka 4 Oct 2019, 5:00 am
ಬೆಳಗಾವಿ: ಗೋಕಾಕ ತಾಲೂಕಿನ ಫಾಲ್ಸ್‌ ಬಳಿಯ ದನದ ಓಣಿ ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸ್ಥಳೀಯರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿಗ್ರಾಮಸ್ಥರು ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web 3 LBS 4_53


'ದನದ ಓಣಿಯ 500 ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸುವಂತೆ ಒತ್ತಾಯಿಸಿ ಕಳೆದ ಸೆ.16 ರಂದು ಪ್ರತಿಭಟನೆ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿದನದ ಓಣಿಯಿಂದ ಗೋಕಾಕ ನಗರದ ತಹಸೀಲ್ದಾರ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗೋಕಾಕ ಮಿಲ್‌ನ ಹಿತಾಸಕ್ತಿ ಕಾಯುವ ರಾಜಕೀಯ ಪ್ರೇರಿತ ಗುಂಪೊಂದು ಪ್ರತಿಭಟನಾಕಾರರರೊಂದಿಗೆ ಗಲಾಟೆ ಮಾಡಿ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಿತ್ತು. ಗೋಕಾಕ ಪೊಲೀಸರು ಪ್ರತಿಭಟನೆಗೆ ಅಡ್ಡಿಪಡಿಸಿದ ಗುಂಪಿನ ವಿರುದ್ಧ ಕ್ರಮಕೈಗೊಳ್ಳದೆ ಪ್ರತಿಭಟನೆ ನಡೆಸುತ್ತಿದ್ದ ದನದ ಓಣಿ ಗ್ರಾಮಸ್ಥರ ಮೇಲೆ ಕೇಸ್‌ ದಾಖಲಿಸಿದ್ದಾರೆ. ಕೂಡಲೇ ಈ ಕೇಸ್‌ ವಾಪಸ್‌ ಪಡೆಯಬೇಕು' ಎಂದು ಮನವಿಯಲ್ಲಿಒತ್ತಾಯಿಸಲಾಗಿದೆ. ದೀಪಕ ರಾಯನ್ನವರ, ವಿಠ್ಠಲ ಬೋರನ್ನವರ, ಎನ್‌.ಬಿ ನಾಯಿಕ, ಶಕುಂತಲಾ ಮಾದರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ