ಆ್ಯಪ್ನಗರ

ಪ್ಯಾಕೇಜ್‌ ಟೆಂಡರ್‌ ಪದ್ಧತಿ ಬೇಡ

ಬೆಳಗಾವಿ: ಸರಕಾರಿ ಕಾಮಗಾರಿಗಳನ್ನು ಪ್ಯಾಕೇಜ್‌ ರೂಪದಲ್ಲಿ ...

Vijaya Karnataka 30 Jul 2019, 5:00 am
ಬೆಳಗಾವಿ: ಸರಕಾರಿ ಕಾಮಗಾರಿಗಳನ್ನು ಪ್ಯಾಕೇಜ್‌ ರೂಪದಲ್ಲಿ ಗುತ್ತಿಗೆ ನೀಡುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ಜಿಲ್ಲಾ ಎಸ್‌ಸಿ ಮತ್ತು ಎಸ್‌ಟಿ ಗುತ್ತಿಗೆದಾರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
Vijaya Karnataka Web BEL-29 LBS 3


ರಾಜ್ಯ ಸರಕಾರ 50 ಲಕ್ಷ ರೂ. ಒಳಗಿನ ಮೀಸಲಾತಿ ಕಾಮಗಾರಿಗಳನ್ನು ಪ್ಯಾಕೇಜ್‌ ಮಾಡಬಾರದೆಂದು ಆದೇಶ ಮಾಡಿದೆ. ಆದರೆ, ಜಿಲ್ಲೆಯ ಅಧಿಕಾರಿಗಳು ಸರಕಾರ ಬಹುತೇಕ ಕಾಮಗಾರಿಗಳನ್ನು ಕೋಟಿ ರೂ.ವರೆಗೆ ಪ್ಯಾಕೇಜ್‌ ಮಾಡಿಕೊಂಡು ಗುತ್ತಿಗೆ ನೀಡುತ್ತಿದ್ದಾರೆ. ಕಾಮಗಾರಿ ನೀಡುವಲ್ಲಿ ರಾಜ್ಯ ಸರಕಾರದ ಆದೇಶವನ್ನು ಅಧಿಕಾರಿಗಳು ಉಲ್ಲಂಘನೆ ಮಾಡುತ್ತಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆ ಹಾಗೂ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

5 ಲಕ್ಷ ರೂ. ಒಳಗಿನ ಕಾಮಗಾರಿಗಳನ್ನು ಅಧಿಕಾರಿಗಳು ಪ್ರಕಟಣೆ ಕೊಡದೆ ನೇರವಾಗಿ ಬೇಕಾದವರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ಅನೇಕ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಎಲ್ಲ ಕಾಮಗಾರಿಗಳ ಬಗ್ಗೆ ಸಾರ್ವಜನಿಕ ಪ್ರಕಟಣೆ ನೀಡಬೇಕು. 50 ಲಕ್ಷ ರೂ. ಒಳಗಿನ ಕಾಮಗಾರಿಗಳ ಪ್ಯಾಕೇಜ್‌ ಪದ್ಧತಿ ಕೈಬಿಡಬೇಕು. ಮಹಾನಗರ ಪಾಲಿಕೆಯ 100 ಕೋಟಿ ರೂ.ಯಲ್ಲಿ ನೀಡಲಾಗುತ್ತಿರುವ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ನೀಡಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಅಶೋಕ ಮಮದಾಪೂರ, ಉಪಾಧ್ಯಕ್ಷ ಶಿವಪ್ಪ ತಳವಾರ, ಕಾರ್ಯದರ್ಶಿ ಸಿಂಧೂರಲಕ್ಷ್ಮಣ ಮಲ್ಲೇಪೂರಕರ, ರಾಮಪ್ಪ ಪಮ್ಮಾರ, ರಾಜು ಜಂಗಟಿ, ರಾಜಾರಾಮ ದಂಡಗಲ್ಲಕರ, ಕೃಷ್ಣಾ ವಡ್ಡರ, ಅಶೋಕ ಬಂಡಿ, ಶಂಕರ ಬಂಡಿವಡ್ಡರ, ಸಾಗರ ಅಷ್ಟೇಕರ, ಮೋಹನ ಶಿಂಗಾಡೆ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ