ತೆಲಸಂಗ: ಸಮೀಪದ ಹಾಲಳ್ಳಿ ಗ್ರಾಮದ ಬ್ಯಾಡರಟ್ಟಿ ಹಾಗೂ ನ್ಯಾಮಗೌಡರ ಓಣಿಗಳಿಗೆ ಪ್ರತಿದಿನ ಟ್ಯಾಂಕರ್ ನೀರು ಪೂರೈಸದಿದ್ದರೆ ಹೋರಾಟ ಅನಿವಾರ್ಯ ಎಂದು ಕರ್ನಾಟಕ ವಿಶ್ವನಿರ್ಮಾಣ ಸೇನೆ ಅಥಣಿ ತಾಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಹೊನಗೌಡ ಎಚ್ಚರಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಓಣಿಗಳಲ್ಲಿ ನಾಲ್ಕು ದಿನಗಳಿಗೊಮ್ಮೆ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಹಾಲಳ್ಳಿ ಗ್ರಾಮದಲ್ಲೆಡೆ ಕುಡಿಯುವ ನೀರಿಗಾಗಿ ನಿರ್ಮಾಣವಾಗಿರುವ ಯಾವೊಂದು ಜಲಕುಂಭಕ್ಕೆ ನಳಗಳಿಲ್ಲ, ಪೈಪ್ಲೈನ್ ಇಲ್ಲ. ಕುಂಭದಲ್ಲಿ ನೀರು ತುಂಬುವ ಕೆಲಸವೂ ನಡೆಯುತ್ತಿಲ್ಲ. ಬರಗಾಲದಿಂದ ಜನ ತತ್ತರಿಸಿ ಹೋಗಿದ್ದರೂ ಅಧಿಕಾರಿಗಳು ಬರನಿರ್ವಹಣೆಯ ಅಪೂರ್ಣ ಕೆಲಸ ಮಾಡಿ ಕೈತೊಳೆದುಕೊಂಡು ಬಿಟ್ಟಿದ್ದಾರೆ. ನೀರು ಕೊಡುವ ಪ್ರಾಮಾಣಿಕ ಕೆಲಸ ಅಧಿಕಾರಿಗಳಿಂದ ಆಗಿಲ್ಲ ಎಂದು ದೂರಿದ್ದಾರೆ.
ಗಟಾರ ಸ್ವಚ್ಛಗೊಳಿಸಿ :
ಗ್ರಾಮದಲ್ಲಿ ಬಚ್ಚಲು ನೀರು ಹರಿದು ಹೋಗುವ ಗಟಾರದಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ತೊಂದರೆಯಾಗಿದೆ. ಇದರಿಂದಾಗಿ ಇಲ್ಲಿ ವಾಸಿಸುವ ಜನರಿಗೆ ಗಟಾರದ ಗಬ್ಬು ವಾಸನೆ ಹಾಗೂ ಸೊಳ್ಳೆ ಕಾಟ ಹೆಚ್ಚಾಗಿದೆ. ಈ ಹಿಂದೆ ಮನವಿ ಮಾಡಿದಾಗ ತುರ್ತಾಗಿ ಗಟಾರ ದುರಸ್ತಿ ಹಾಗೂ ಸ್ವಚ್ಛ ಮಾಡಿಕೊಡುವುದಾಗಿ ಹೇಳಿದ್ದ ಅಧಿಕಾರಿಗಳು ಮೌನ ವಹಿಸಿದ್ದಾರೆ. ಸದ್ಯ ಸಾಂಕ್ರಾಮಿಕ ರೋಗಗಳ ಭೀತಿಯ ಜತೆಗೆ ನೀರಿನ ಸಮಸ್ಯೆ ಎದುರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ ಎಂದ ಹೊನಗೌಡ ಅವರು ಗ್ರಾಮದ ಬೇಡಿಕೆಗಳನ್ನು ಈಡೇರಿಸದಿದ್ದರೆ ಗ್ರಾಮಸ್ಥರೆಲ್ಲ ಸೇರಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಓಣಿಗಳಲ್ಲಿ ನಾಲ್ಕು ದಿನಗಳಿಗೊಮ್ಮೆ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಹಾಲಳ್ಳಿ ಗ್ರಾಮದಲ್ಲೆಡೆ ಕುಡಿಯುವ ನೀರಿಗಾಗಿ ನಿರ್ಮಾಣವಾಗಿರುವ ಯಾವೊಂದು ಜಲಕುಂಭಕ್ಕೆ ನಳಗಳಿಲ್ಲ, ಪೈಪ್ಲೈನ್ ಇಲ್ಲ. ಕುಂಭದಲ್ಲಿ ನೀರು ತುಂಬುವ ಕೆಲಸವೂ ನಡೆಯುತ್ತಿಲ್ಲ. ಬರಗಾಲದಿಂದ ಜನ ತತ್ತರಿಸಿ ಹೋಗಿದ್ದರೂ ಅಧಿಕಾರಿಗಳು ಬರನಿರ್ವಹಣೆಯ ಅಪೂರ್ಣ ಕೆಲಸ ಮಾಡಿ ಕೈತೊಳೆದುಕೊಂಡು ಬಿಟ್ಟಿದ್ದಾರೆ. ನೀರು ಕೊಡುವ ಪ್ರಾಮಾಣಿಕ ಕೆಲಸ ಅಧಿಕಾರಿಗಳಿಂದ ಆಗಿಲ್ಲ ಎಂದು ದೂರಿದ್ದಾರೆ.
ಗಟಾರ ಸ್ವಚ್ಛಗೊಳಿಸಿ :
ಗ್ರಾಮದಲ್ಲಿ ಬಚ್ಚಲು ನೀರು ಹರಿದು ಹೋಗುವ ಗಟಾರದಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ತೊಂದರೆಯಾಗಿದೆ. ಇದರಿಂದಾಗಿ ಇಲ್ಲಿ ವಾಸಿಸುವ ಜನರಿಗೆ ಗಟಾರದ ಗಬ್ಬು ವಾಸನೆ ಹಾಗೂ ಸೊಳ್ಳೆ ಕಾಟ ಹೆಚ್ಚಾಗಿದೆ. ಈ ಹಿಂದೆ ಮನವಿ ಮಾಡಿದಾಗ ತುರ್ತಾಗಿ ಗಟಾರ ದುರಸ್ತಿ ಹಾಗೂ ಸ್ವಚ್ಛ ಮಾಡಿಕೊಡುವುದಾಗಿ ಹೇಳಿದ್ದ ಅಧಿಕಾರಿಗಳು ಮೌನ ವಹಿಸಿದ್ದಾರೆ. ಸದ್ಯ ಸಾಂಕ್ರಾಮಿಕ ರೋಗಗಳ ಭೀತಿಯ ಜತೆಗೆ ನೀರಿನ ಸಮಸ್ಯೆ ಎದುರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ ಎಂದ ಹೊನಗೌಡ ಅವರು ಗ್ರಾಮದ ಬೇಡಿಕೆಗಳನ್ನು ಈಡೇರಿಸದಿದ್ದರೆ ಗ್ರಾಮಸ್ಥರೆಲ್ಲ ಸೇರಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.