ಆ್ಯಪ್ನಗರ

ಮಹಾರಾಷ್ಟ್ರಕ್ಕೆ ಸರ್ವಪಕ್ಷ ಗಳ ನಿಯೋಗ ಒಯ್ಯಲು ಆಗ್ರಹ

ಬೆಳಗಾವಿ : ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಸೋಮವಾರ ಕನ್ನಡ ಪರ ಹಾಗೂ ರೈತ ಪರ ...

Vijaya Karnataka 21 May 2019, 5:00 am
ಬೆಳಗಾವಿ : ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಸೋಮವಾರ ಕನ್ನಡ ಪರ ಹಾಗೂ ರೈತ ಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಡಾ. ಎಚ್‌.ಬಿ. ಬೂದೆಪ್ಪ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-20 LBS 2


ಚಿಕ್ಕೋಡಿ, ಅಥಣಿ ಮತ್ತಿತರ ಕಡೆ ರೈತ ಪರ ಸಂಘಟನೆಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನಾಕಾರರು. ಹಿಡಕಲ್‌ ಡ್ಯಾಂನಿಂದ ಕೃಷ್ಣಾ ನದಿಗೆ 94 ಕಿಮೀ ದೂರದ ಕಾಲುವೆ ಮೂಲಕ ಒಂದು ಟಿಎಂಸಿ ನೀರು ಹರಿಸುವುದು ಅವೈಜ್ಞಾನಿಕವಾಗಿದೆ. ಈ ತೀರ್ಮಾನದಿಂದ ಕೃಷ್ಣಾ ನದಿಗೆ ನೀರು ತಲುಪಲು ಸಾಧ್ಯವಿಲ್ಲ. ಆದ್ದರಿಂದ ಇಂಥ ಪ್ರಯತ್ನಗಳನ್ನು ಕೈಬಿಟ್ಟು ಕೂಡಲೇ ಕೊಯ್ನಾ ಜಲಾಶಯದಿಂದ ನೀರು ಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಹಿರಿಯ ಅಧಿಕಾರಿಗಳ ಮುಖಾಂತರ ಮಹಾರಾಷ್ಟ್ರ ಸರಕಾರದ ಜತೆಗೆ ವ್ಯವಹಾರ ಮಾಡಿದರೆ ನೀರು ಬರುವುದಿಲ್ಲ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸರ್ವಪಕ್ಷಗಳ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ ಅಲ್ಲಿನ ಸರಕಾರದ ಜತೆಗೆ ಮಾತುಕತೆ ನಡೆಸಿ ನೀರು ಬಿಡುಗಡೆಗೆ ಪ್ರಯತ್ನಿಸಬೇಕು. ಇದನ್ನು ಬಿಟ್ಟು ರಾಜ್ಯದಲ್ಲಿ ಕುಳಿತು ಪತ್ರ ವ್ಯವಹಾರ ಮಾಡುವುದರಿಂದ ಕೃಷ್ಣಾ ನದಿಗೆ ನೀರು ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ, ರೈತ ಹೋರಾಟಗಾರ ಸಿದ್ದಗೌಡ ಮೋದಗಿ, ಶಿವಪ್ಪ ಎಸ್‌., ದೀಪಕ ಗುಡಗನಟ್ಟಿ, ಸಾಗರ ಬೋರಗಲ್ಲ, ಗೌರಿ ಲಮಾಣಿ, ರಾಜು ಕುಸೋಜಿ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ