ಆ್ಯಪ್ನಗರ

ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆಗೆ ನಿರ್ಣಯ ಕೈಗೊಳ್ಳಲು ಆಗ್ರಹ

ಗೋಕಾಕ : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಹಾಗೂ ಚಿಕ್ಕೋಡಿ ಜಿಲ್ಲೆಗಳ ರಚನೆಗೆ ರಾಜ್ಯ ಸರಕಾರವು ಪ್ರಸಕ್ತ ಬೆಳಗಾವಿಯ ಅಧಿವೇಶನದಲ್ಲಿಯೇ ನಿರ್ಣಯ ...

Vijaya Karnataka 10 Dec 2018, 5:00 am
ಗೋಕಾಕ : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಹಾಗೂ ಚಿಕ್ಕೋಡಿ ಜಿಲ್ಲೆಗಳ ರಚನೆಗೆ ರಾಜ್ಯ ಸರಕಾರವು ಪ್ರಸಕ್ತ ಬೆಳಗಾವಿಯ ಅಧಿವೇಶನದಲ್ಲಿಯೇ ನಿರ್ಣಯ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದ್ದಾರೆ.
Vijaya Karnataka Web demand to take decision gokakah chikkodi district formation
ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆಗೆ ನಿರ್ಣಯ ಕೈಗೊಳ್ಳಲು ಆಗ್ರಹ


ನಗರದಲ್ಲಿ ಭಾನುವಾರ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿರುವ ಅವರು, ''ಗೋಕಾಕ ಜಿಲ್ಲಾ ರಚನೆಯ ಹೋರಾಟವು ಪ್ರಾರಂಭವಾಗಿ ದಶಕಗಳೇ ಕಳೆದಿವೆ. ಗೋಕಾಕ ಜಿಲ್ಲಾ ರಚನೆಯ ಬೇಡಿಕೆಗೆ ರಾಜ್ಯ ಸರಕಾರವೇ ನೇಮಿಸಿದ ಆಯೋಗಗಳ ಶಿಫಾರಸ್ಸಿನ ಹಿನ್ನೆಲೆ ಇದೆ. ಅನೇಕ ಸಂದರ್ಭಗಳಲ್ಲಿ ಗೋಕಾಕ ಜಿಲ್ಲಾ ರಚನೆಯ ಹೋರಾಟ ತೀವ್ರತೆ ಪಡೆದಾಗ ಸರಕಾರ ಅದಕ್ಕೆ ಪೂರಕವಾದ ಪ್ರತಿಕ್ರಿಯೆ ನೀಡಿದ್ದರೂ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುವಲ್ಲಿ ಹಿಂದೇಟು ಹಾಕುತ್ತಿರುವುದು ಖೇದದ ಸಂಗತಿಯಾಗಿದೆ'', ಎಂದು ಹೇಳಿದ್ದಾರೆ.

''ಬೆಳಗಾವಿ ಅಧಿವೇಶನದಲ್ಲಿ ಸುರಳಿತವಾಗಿ ಫಲಪ್ರದ ಚರ್ಚೆ ಮತ್ತು ನಿರ್ಣಯಗಳು ಆಗಲಿ ಎಂಬ ಉದ್ದೇಶದಿಂದ ಗೋಕಾಕ ಜಿಲ್ಲಾ ರಚನೆಯ ಹೋರಾಟವನ್ನು ತೀವ್ರಗೊಳಿಸಿಲ್ಲ. ಆದರೆ ಪ್ರಸಕ್ತ ಅಧಿವೇಶನದಲ್ಲಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲಾ ರಚನೆಗಳ ನಿರ್ಣಯ ಕೈಗೊಳ್ಳದಿದ್ದರೆ ಉಗ್ರ ಸ್ವರೂಪದ ಹೋರಾಟ ಕೈಗೊಳ್ಳಲಾಗುವುದು'', ಎಂದು ಸರಕಾರವನ್ನು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ