ಆ್ಯಪ್ನಗರ

ಘಟಪ್ರಭಾ ಎಡದಂಡೆ ಕಾಲುವೆ ಸ್ವಚ್ಛಗೊಳಿಸಿ, ನೀರು ಹರಿಸಲು ಆಗ್ರಹ

ಚಿಕ್ಕೋಡಿ: ಘಟಪ್ರಭಾ ಎಡದಂಡೆ ಕಾಲುವೆ ಸ್ವಚ್ಛಗೊಳಿಸಿ ...

Vijaya Karnataka 9 Oct 2019, 5:00 am
ಚಿಕ್ಕೋಡಿ: ಘಟಪ್ರಭಾ ಎಡದಂಡೆ ಕಾಲುವೆ ಸ್ವಚ್ಛಗೊಳಿಸಿ, ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ತಾಲೂಕಿನ ಕೇರೂರ ಗ್ರಾಮದ ಬಳಿಯ ಕಾಲುವೆಗೆ ಇಳಿದ ರಾಜ್ಯ ರೈತ ಸಂಘದ ಕಾರ್ಯಕರ್ತರು ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು.
Vijaya Karnataka Web 8CKD1_53


ಈ ಬಗ್ಗೆ ನೀರಾವರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಚುನಾವಣೆ ಸಂದರ್ಭದಲ್ಲಿನೀರು ಹರಿಸುವ ಭರವಸೆ ನೀಡುತ್ತಾರೆ. ಆದರೆ ಕಾರ್ಯರೂಪಕ್ಕೆ ತರಲು ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಮುಂದೆ ಬಂದಿಲ್ಲ. ಇಲ್ಲಿಯವರೆಗೆ ಯಾವ ಜನಪ್ರತಿನಿಧಿಯೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಅಧ್ಯಕ್ಷ ಸತ್ಯಪ್ಪ ಮಲ್ಲಾಪುರೆ, ತಾಲೂಕಾ ಅಧ್ಯಕ್ಷ ಮಂಜುನಾಥ ಪರಗೌಡಾ, ಶಂಕರ ಪಡೇದ, ಜ್ಯೋತಿಬಾ ಮಗದುಮ್ಮ, ಪುಂಡಲೀಕ ಮಾನೆ, ಮಾರುತಿ ಹುಲಕುಂದೆ, ಶಿವಾನಂದ ಬಿಳಗೆ, ದೊಂಡಿಬಾ ಹಕ್ಯಾಗೋಳ, ತಿಪ್ಪಣ್ಣ ಬೀಳಗೆ ಮತ್ತಿತರರು ಉಪಸ್ಥಿತರಿದ್ದರು.

ಹೆದ್ದಾರಿ ಬಂದ್‌ ಎಚ್ಚರಿಕೆ:
ಮುಂಬರುವ 10 ದಿನದೊಳಗೆ ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಬೇಕು. ಇಲ್ಲದಿದ್ದರೆ ಚಿಕ್ಕೋಡಿ-ಅಂಕಲಿ ರಾಜ್ಯ ಹೆದ್ದಾರಿ ಬಂದ್‌ ಮಾಡಿ ತೀವ್ರ ಹೋರಾಟ ನಡೆಸುತ್ತೇವೆ. ಜತೆಗೆ ಕೇರೂರ ಗ್ರಾಮದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಚಿಕ್ಕೋಡಿಗೆ ತೆರಳಿ ಚಿಕ್ಕೋಡಿಯಲ್ಲಿಕರ್ನಾಟಕ ನೀರಾವರಿ ನಿಗಮದ ಕಚೇರಿ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ