ಆ್ಯಪ್ನಗರ

ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಆಗ್ರಹ

ಬೆಳಗಾವಿ: ಮುಂಬಡ್ತಿಯಲ್ಲಿನ ಅನ್ಯಾಯ ...

Vijaya Karnataka 18 Jul 2019, 5:00 am
ಬೆಳಗಾವಿ: ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅವರಿಗೆ ಮನವಿ ರವಾನಿಸಿದರು.
Vijaya Karnataka Web BEL-17 LBS 2


ಗ್ರಾಮ ಲೆಕ್ಕಾಧಿಕಾರಿಗಳಿಗೆ ಅನ್ಯ ಇಲಾಖೆಯ ಕೆಲಸದ ಒತ್ತಡ ಹೆಚ್ಚುತ್ತಿರುವುದರಿಂದ ಸ್ವಂತ ಇಲಾಖೆ ಕೆಲಸಗಳನ್ನು ನಿಗದಿತ ಸಮಯದಲ್ಲಿ ಮಾಡಲು ಸಾಧ್ಯವಾಗುತ್ತಿಲ್ಲ. ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಕೆಲಸಗಳನ್ನು ಪೂರ್ಣಗೊಳಿಸಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಕಂದಾಯ ಇಲಾಖೆಯಿಂದ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸದ ವ್ಯಾಪ್ತಿಯ ಪಟ್ಟಿ ನೀಡಬೇಕು. ರಜಾ ದಿನಗಳಲ್ಲಿ ಒತ್ತಡ ಹೇರುವುದನ್ನು ಸರಕಾರ ನಿಷೇಧಿಸಿದ್ದರೂ ರಜಾ ದಿನಗಳಲ್ಲಿ ಕೆಲಸದ ಒತ್ತಡ ಹೆಚ್ಚುತ್ತಿದೆ. ಇದರಿಂದ ಮಾನಸಿಕ ನೆಮ್ಮದಿ ಹಾಳಾಗುತ್ತಿದೆ. ಅನೇಕ ಜನರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಬೇಕು. ಕರ್ತವ್ಯದಲ್ಲಿ ಮೃತಪಟ್ಟಿರುವ ಗ್ರಾಮ ಲೆಕ್ಕಾಧಿಕಾರಿ ಸಾಹೇಬ ಪಾಟೀಲ ಕುಟುಂಬಕ್ಕೆ ವಿಶೇಷ ಪರಿಹಾರ ಮಂಜೂರು ಮಾಡಬೇಕು. ಗ್ರಾಮ ಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆ ದರವನ್ನು 1,000 ರೂ. ಹೆಚ್ಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎನ್‌.ಆರ್‌. ಪಾಟೀಲ, ಉಪಾಧ್ಯಕ್ಷ ಎಸ್‌.ಬಿ. ಪಾಶ್ಚಾಪುರೆ, ಪ್ರಧಾನ ಕಾರ್ಯದರ್ಶಿ ಪಿ.ಬಿ. ಗಮಾನಿ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ